ಶಿವಮೊಗ್ಗ: ‘ಸಿರಿಗೆರೆ ತರಳಬಾಳು ಬೃಹನ್ಮಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಂದ ಬೆಳೆದವರು ಇದೀಗ ಅವರ ವಿರುದ್ಧವೇ ಮಾತನಾಡುತ್ತಿದ್ದಾರೆ. ತಾಲ್ಲೂಕಿನ 70 ಹಳ್ಳಿಗಳ ಸುಮಾರು 1 ಸಾವಿರಕ್ಕೂ ಅಧಿಕ ಭಕ್ತರು ಗುರುವಾರ ಸ್ವಾಮೀಜಿಯನ್ನು ಭೇಟಿ ಮಾಡುತ್ತಿದ್ದೇವೆ’ ಎಂದು ಶಿವಮೊಗ್ಗ ತಾಲ್ಲೂಕು ಗ್ರಾಮಾಂತರ ಶ್ರೀ ತರಳಬಾಳು ಸೇವಾ ಸಮಿತಿ ಅಧ್ಯಕ್ಷ ಎಸ್.ಎಚ್. ಷಣ್ಮುಖಪ್ಪ ಹೇಳಿದರು.
‘ನಾವು ಸ್ವಾಮೀಜಿ ಅವರೊಂದಿಗೆ ಇರುತ್ತೇವೆ. ನಮ್ಮ ಸಮುದಾಯದ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಅಣಬೇರು ರಾಜಣ್ಣ ಅವರು ಸ್ವಾಮೀಜಿ ಕುರಿತು ಇಲ್ಲಸಲ್ಲದ ಮಾತನಾಡುತ್ತಿದ್ದಾರೆ. ರೆಸಾರ್ಟ್ನಲ್ಲಿ ಸಭೆ ನಡೆಸಿ ಪೀಠ ತ್ಯಾಗಕ್ಕೆ ಒತ್ತಡ ಹೇರುತ್ತಿದ್ಧಾರೆ. ದೂರು ದುಮ್ಮಾನುಗಳು ಇದ್ದರೇ ಮಠಕ್ಕೆ ಬಂದು ಕೇಳಲಿ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಸ್ವಾಮೀಜಿ ಅವರು ಮಠದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಮಠವನ್ನು ಎತ್ತರಕ್ಕೆ ಬೆಳೆಸಿದ್ದಾರೆ. ಸಾವಿರಾರು ಕೋಟಿ ಆಸ್ತಿ ಮಾಡಿದ್ದಾರೆ. ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.