ADVERTISEMENT

ಕೂಡ್ಲಿಗೆರೆ ಸುಬ್ರಹ್ಮಣ್ಯಸ್ವಾಮಿ ಜಾತ್ರೆ: ದೇಹದಂಡನೆ, ಭಕ್ತಿಯ ಪರಾಕಾಷ್ಠೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 8:23 IST
Last Updated 19 ಮಾರ್ಚ್ 2022, 8:23 IST
ಭದ್ರಾವತಿ ಕೂಡ್ಲಿಗೆರೆ ಸುಬ್ರಹ್ಮಣ್ಯಸ್ವಾಮಿ ಜಾತ್ರೆಯಲ್ಲಿ ಪುನೀತ್ ಅಭಿಮಾನಿ ತನ್ನ ದೇಹದಂಡನೆಯ ಜತೆಗೆ ಪುನೀತ್ ರಾಜಕುಮಾರ್ ಭಾವಚಿತ್ರವನ್ನು ತೊಟ್ಟಿಲಲ್ಲಿ ಇಟ್ಟು ತೂಗುತ್ತಿರುವುದು – ಪ್ರಜಾವಾಣಿ ಚಿತ್ರ
ಭದ್ರಾವತಿ ಕೂಡ್ಲಿಗೆರೆ ಸುಬ್ರಹ್ಮಣ್ಯಸ್ವಾಮಿ ಜಾತ್ರೆಯಲ್ಲಿ ಪುನೀತ್ ಅಭಿಮಾನಿ ತನ್ನ ದೇಹದಂಡನೆಯ ಜತೆಗೆ ಪುನೀತ್ ರಾಜಕುಮಾರ್ ಭಾವಚಿತ್ರವನ್ನು ತೊಟ್ಟಿಲಲ್ಲಿ ಇಟ್ಟು ತೂಗುತ್ತಿರುವುದು – ಪ್ರಜಾವಾಣಿ ಚಿತ್ರ   

ಭದ್ರಾವತಿ: ಕೂಡ್ಲಿಗೆರೆ ಸುಬ್ರಹ್ಮಣ್ಯಸ್ವಾಮಿ ಜಾತ್ರೆ ಶುಕ್ರವಾರ ವೈಭವದಿಂದ ನಡೆಯಿತು. ಭಕ್ತರು ದೇಹದಂಡನೆಯೊಂದಿಗೆ ಭಕ್ತಿಯ ಪರಾಕಾಷ್ಠೆ ಮೆರೆದರು.

350ಕ್ಕೂ ಹೆಚ್ಚು ಮಾಲಾಧಾರಿ ಭಕ್ತರು ತಮ್ಮ ಹರಕೆಗೆ ತಕ್ಕಂತೆ ದೇಹದಂಡನೆ ಮಾಡಿಕೊಂಡು ಸ್ವಾಮಿಯ ದರ್ಶನ ಪಡೆದರು. ಭಕ್ತರು ಆಟಗೇರಿ ಕ್ಯಾಂಪ್ ಬಳಿಯ ಚಾನಲ್ ಬಳಿಯಲ್ಲಿ ದೇಹದಂಡನೆ ಮಾಡಿಕೊಂಡು ಅಲ್ಲಿಂದ ಕೊಂಬು, ಕಹಳೆ, ವಾದ್ಯ, ಡೊಳ್ಳು, ನಗಾರಿ ಮೊದಲಾದ ವಾದ್ಯಮೇಳದೊಂದಿಗೆ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಬಂದರು.

ಕೆನ್ನೆಯ ಎರಡೂ ಬದಿಗಳಲ್ಲಿ ತ್ರಿಶೂಲ, ನಾಲಿಗೆಗೆ ತ್ರಿಶೂಲ, ಕಲ್ಲಿನ ಗುಂಡುಗಳಿಗೆ ಕಬ್ಬಿಣದ ಸರಳು ಹಾಕಿ ಅದನ್ನು ಬೆನ್ನಿಗೆ ಚುಚ್ಚಿಕೊಂಡು ಸಾಗಿದರು. ಭಕ್ತರ ಜತೆಯಲ್ಲಿ ಸಹಸ್ರಾರು ಮಂದಿ ಹೆಜ್ಜೆ ಹಾಕಿದರು. ದೇಹದಂಡನೆ ಮಾಡಿಕೊಂಡವರು ದಾರಿಯಲ್ಲಿ ಅಡ್ಡವಾಗಿ ಮಲಗಿದ್ದ ಭಕ್ತರನ್ನು ದಾಟಿಕೊಂಡು ಸಾಗಿದರು.

ADVERTISEMENT

ಪುನೀತ್ ಅಭಿಮಾನ: ಕ್ರೇನಿಗೆ ಬೆನ್ನಿನ ಮೂಲಕ ಕಬ್ಬಿಣದ ಕೊಂಡಿ ಕಟ್ಟಿಕೊಂಡು ನೇತಾಡುತ್ತಿದ್ದ ಭಕ್ತನೊಬ್ಬ ಬೆನ್ನಿಗೆ ಕಬ್ಬಿಣದ ಸರಪಳಿ, ಕೆನ್ನೆಯ ಎರಡು ಕಡೆ ಚಾಚಿರುವ ತ್ರಿಶೂಲ, ತನ್ನ ಎರಡೂ ಕೈಯಲ್ಲಿ ಪುನೀತ್ ರಾಜಕುಮಾರ್ ಭಾವಚಿತ್ರವಿಟ್ಟು ತೊಟ್ಟಿಲು ತೂಗುತ್ತಿದ್ದ ದೃಶ್ಯ ನೋಡುಗರಲ್ಲಿ ಬೆರುಗು ಮೂಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.