ADVERTISEMENT

ಶಿವಮೊಗ್ಗ: ಸಾಮೂಹಿಕ ಪ್ರಾರ್ಥನೆ, ಏಳು ಜನರಿಗೆ ಜ್ವರ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 14:35 IST
Last Updated 3 ಏಪ್ರಿಲ್ 2020, 14:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿವಮೊಗ್ಗ: ಕೊರೊನಾ ನಿರ್ಬಂಧಗಳನ್ನು ಉಲ್ಲಂಘಿಸಿ ಆಯನೂರು–ಹಾರನಹಳ್ಳಿ ಸಮೀಪದ ಕೆಸವಿನಕಟ್ಟೆ ಮಸೀದಿಯಲ್ಲಿ ಪ್ರಾಥನೆ ನಡೆಸುತ್ತಿದ್ದ 70ಕ್ಕೂ ಹೆಚ್ಚು ಜನರನ್ನು ಕುಂಸಿ ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್ ಹೇರಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮುಖ್ಯದ್ವಾರಕ್ಕೆ ಬೀಗ ಜಡಿದಿದ್ದಾರೆ. ನಂತರ ವೈದ್ಯರನ್ನು ಕರೆಸಿ ತಪಾಸಣೆ ಮಾಡಿಸಿದ್ದಾರೆ. ಅವರಲ್ಲಿ ಏಳು ಜನರಿಗೆ ಜ್ವರದ ಲಕ್ಷಣಗಳು ಇರುವುದು ಖಚಿತಪಟ್ಟಿದೆ. ತಕ್ಷಣ ಅವರನ್ನು ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳದವರನ್ನು ಶಾಲಾ ಕಟ್ಟಡದಲ್ಲಿ ಉಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.