ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ 17 ವರ್ಷದ ಹೆಣ್ಣು ಹುಲಿ ಅಂಜನಿ ಗುರುವಾರ ಅನಾರೋಗ್ಯದಿಂದ ಮೃತಪಟ್ಟಿದೆ.
ಕಳೆದ ಮೂರು ತಿಂಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅಂಜನಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾಳೆ ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ.
ಅಂಜನಿಯನ್ನು ಮೈಸೂರಿನ ಕೂರ್ಗಳ್ಳಿಯ ಚಾಮುಂಡಿ ವನ್ಯಜೀವಿ ಸಂರಕ್ಷಣೆ, ಪುನರ್ವಸತಿ ಹಾಗೂ ಸಂತಾನೋತ್ಪತ್ತಿ ಕೇಂದ್ರದಿಂದ 2022ರಲ್ಲಿ ತ್ಯಾವರೆಕೊಪ್ಪಕ್ಕೆ ತರಲಾಗಿತ್ತು.
ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ಸದ್ಯ ಒಂದು ಗಂಡು ಹಾಗೂ ನಾಲ್ಕು ಹೆಣ್ಣು ಹುಲಿಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.