ADVERTISEMENT

ಸಾಗರ: ಸಿಗಂದೂರು ಕ್ಷೇತ್ರಕ್ಕೆ ಬರದಿರಲು ಭಕ್ತರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 19:26 IST
Last Updated 29 ಜೂನ್ 2020, 19:26 IST
ಸಿಗಂದೂರು ಚೌಡೇಶ್ವರಿ ದೇವಿ
ಸಿಗಂದೂರು ಚೌಡೇಶ್ವರಿ ದೇವಿ   

ಸಾಗರ: ಕೋವಿಡ್-19ರ ಸಂಕಷ್ಟ ಮುಗಿಯುವವರೆಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭಕ್ತರು ಆಗಮಿಸಬಾರದು ಎಂದು ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ರವಿ ಸಿಗಂದೂರು ಹಾಗೂ ತುಮರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವ ಭೀತಿಯಲ್ಲಿ ಈಗಾಗಲೇ ದೇವಾಲಯದ ಬಾಗಿಲು ಮುಚ್ಚಿದ್ದರೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬಂದು ದೇವಸ್ಥಾನದ ಹೊರಗೆ ಕೈಮುಗಿದು ಮರಳುತ್ತಿದ್ದಾರೆ. ಇದರಿಂದಾಗಿ ಸಿಗಂದೂರಿಗೆ ಬರುವ ಲಾಂಚ್‌ನಲ್ಲಿ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಹಲವೆಡೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಿಗಂದೂರಿಗೆ ಪ್ರವಾಸಿಗರು ಬರಲು ಕೆಲವು ನಿರ್ಬಂಧಗಳನ್ನು ಜಿಲ್ಲಾಡಳಿತ ಹೇರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT