ADVERTISEMENT

ಅಪಘಾತ: ಆರು ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 5:11 IST
Last Updated 12 ಡಿಸೆಂಬರ್ 2020, 5:11 IST

ಶಿವಮೊಗ್ಗ: ಹೊನ್ನಾಳಿ ರಸ್ತೆಯ ಬೇಡರ ಹೊಸಳ್ಳಿ ಬಳಿ ಶುಕ್ರವಾರ ಕಾರು ಮತ್ತು ಸರಕು ಸಾಗಣೆ ಮಿನಿ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸೇರಿ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯ ಐವರು ಯುವಕರು ಭದ್ರಾವತಿ ತಾಲ್ಲೂಕು ನಾಗಸಮುದ್ರದಲ್ಲಿ ಮದುವೆ ಮುಗಿಸಿಕೊಂಡು ಶಿವಮೊಗ್ಗ ಕಡೆ ಬರುವಾಗ ಬೇಡರ ಹೊಸಳ್ಳಿ ಬಳಿ ಟಾಟಾ ಏಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ. ಸ್ಥಳೀಯರು ಎಲ್ಲರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT