ADVERTISEMENT

ಕುಂಠಿತವಾಗಿದ್ದ ಸ್ಮಾರ್ಟ್‌ಸಿಟಿ ಕಾಮಗಾರಿಗೆ ಮತ್ತೆ ವೇಗ

₹ 945 ಕೋಟಿ ವೆಚ್ಚದ 50 ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 12:22 IST
Last Updated 21 ನವೆಂಬರ್ 2019, 12:22 IST
ಶಿವಮೊಗ್ಗದಲ್ಲಿ ಗುರುವಾರ ನಡೆದ ಸ್ಮಾರ್ಟ್‌ಸಿಟಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು.
ಶಿವಮೊಗ್ಗದಲ್ಲಿ ಗುರುವಾರ ನಡೆದ ಸ್ಮಾರ್ಟ್‌ಸಿಟಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು.   

ಶಿವಮೊಗ್ಗ: ಅತಿವೃಷ್ಟಿ, ಪ್ರವಾಹದ ಪರಿಣಾಮಕುಂಠಿತವಾಗಿದ್ದ ಸ್ಮಾರ್ಟ್‌ಸಿಟಿ ಕಾಮಗಾರಿಗಳು ಮತ್ತೆ ವೇಗ ಪಡೆದುಕೊಂಡಿವೆ.₨ 945 ಕೋಟಿ ವೆಚ್ಚದ 50 ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಸ್ಮಾರ್ಟ್‌ಸಿಟಿ ಕಾಮಗಾರಿ ತ್ವರಿತ ಅನುಷ್ಠಾನಕ್ಕೆ ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಮಾಡಲಾಗಿದೆ. ಮೆಸ್ಕಾಂ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಅರಣ್ಯ ಇಲಾಖೆ, ರಾಷ್ಟ್ರೀಯ ಹೆದ್ದಾರಿಪ್ರಾಧಿಕಾರದ ಅಧಿಕಾರಿಗಳ ಜತೆಪ್ರತಿ ವಾರ ಸಭೆ ನಡೆಸಲಾಗುತ್ತಿದೆ. ಇಲಾಖೆಗಳ ಮಧ್ಯೆ ಸಮನ್ವಯ ಇಟ್ಟುಕೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಕಳಪೆ ಕಾಮಗಾರಿ ವರದಿಯಾದರೆತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆಎಂದರು.

ADVERTISEMENT

ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ₨ 234 ಕೋಟಿ ವೆಚ್ಚದಲ್ಲಿ 3 ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಟ್ಯಾಂಕ್ ಮೊಹಲ್ಲಾ ಉದ್ಯಾನ ಮತ್ತು ಇ-ಗ್ರಂಥಾಲಯ ಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಅಂದಾಜು ₨ 3 ಕೋಟಿ ವೆಚ್ಚದಲ್ಲಿ 15 ಕನ್ಸರ್‌ವೆನ್ಸಿಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ₨ 7.83 ಕೋಟಿ ವೆಚ್ಚದಲ್ಲಿ ನಾಲ್ಕು ಪಾರ್ಕ್‌ಗಳು, ನೆಹರೂ ಸ್ಟೇಡಿಯಂ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ವಿವರ ನೀಡಿದರು.

ಸುಮಾರು ₨ 5 ಕೋಟಿ ವೆಚ್ಚದಲ್ಲಿ 9 ಶಾಲೆಗಳು, 2 ಕಾಲೇಜು ಮತ್ತು 4 ಗ್ರಂಥಾಲಯಗಳನ್ನು ‘ಸ್ಮಾರ್ಟ್ ಲೈಬ್ರರಿ’ಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ₨ 538 ಕೋಟಿ ವೆಚ್ಚದಲ್ಲಿ 108 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. 2.80 ಕಿ.ಮೀಹೆರಿಟೇಜ್ ವಾಕ್, ₨ 20 ಕೋಟಿ ವೆಚ್ಚದಲ್ಲಿ 7 ಪಾರ್ಕ್ ಅಭಿವೃದ್ಧಿ ಮಾಡಲಾಗುತ್ತಿದೆ. ₨ 130 ಕೋಟಿ ವೆಚ್ಚದಲ್ಲಿ ತುಂಗಾ ನದಿ ದಂಡೆ ಅಭಿವೃದ್ಧಿಮಾಡಲಾಗುತ್ತಿದೆ.₨123 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಟೆಂಡರ್ಪ್ರಕ್ರಿಯೆ ನಡೆದಿದೆ.₨ 63 ಕೋಟಿ ಮೊತ್ತದ ಕಾಮಗಾರಿಗಳು ಡಿಪಿಆರ್ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ಗಾಂಧಿಪಾರ್ಕ್ ಅಭಿವೃದ್ಧಿ: ₨ 10 ಕೋಟಿ ವೆಚ್ಚದಲ್ಲಿ ನಗರದ ಗಾಂಧಿಪಾರ್ಕ್ ಅಭಿವೃದ್ಧಿಕಾರ್ಯ ಶೀಘ್ರ ಪ್ರಾರಂಭವಾಗಲಿದೆ. 2.5 ಎಕರೆಯಲ್ಲಿ ವನ್ಯಜೀವಿ ಮಾಹಿತಿಕೇಂದ್ರ, ಸೈನ್ಸ್ ಪಾರ್ಕ್‌ಸೌಲಭ್ಯಗಳನ್ನು ಕಲ್ಪಿಸಲಾಗುವುದುಎಂದರು.

ಪಿಆರ್‌ಒನೇಮಕ: ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಲು ಸಾರ್ವಜನಿಕ ಸಂಪರ್ಕಾಧಿಕಾರಿ ನೇಮಕ ಮಾಡಲಾಗಿದೆ. ಸಾರ್ವಜನಿಕರು ಸ್ಮಾರ್ಟ್ ಸಿಟಿ ಅಹವಾಲುಗಳನ್ನು ಎಂ.ಕೆ.ರತ್ನಾಕರಅವರ ಮೊಬೈಲ್ 94488 24926, 78928 93334 ಸಂಪರ್ಕಿಸಬಹುದು ಎಂದುಮಾಹಿತಿ ನೀಡಿದರು.

ಸ್ಮಾರ್ಟ್ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕಚಿದಾನಂದ ವಟಾರೆ, ಪಾಲಿಕೆ ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.