ಸೊರಬ: ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ ಕೆರೂರು ಭಾರಂಗಿ, ಕಾರ್ಯದರ್ಶಿಯಾಗಿ ವಿನಯ್ ಪಾಟೀಲ್, ಉಪಾಧ್ಯಕ್ಷರಾಗಿ ಎಚ್.ಎಸ್. ಚಂದ್ರಶೇಖರ್ ಆಯ್ಕೆಯಾದರು.
ಅಧ್ಯಕ್ಷ ಸ್ಥಾನಕ್ಕೆ ಎಂ. ನಾಗಪ್ಪ, ನಾಗರಾಜ ಕೆರೂರ್ ಭಾರಂಗಿ, ಕಾರ್ಯದರ್ಶಿ ಸ್ಥಾನಕ್ಕೆ ವಿನಯ್ ಪಾಟೀಲ್, ಕೆ.ಪಿ ಮಾರುತಿ, ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಎಸ್ ಚಂದ್ರಶೇಖರ್, ಪ್ರಶಾಂತ ಕುಮಾರ್ ಎನ್.ಸಿ ಸ್ಪರ್ಧಿಸಿದ್ದರು. ಖಜಾಂಚಿ ಸ್ಥಾನಕ್ಕೆ ಗೋಪಾಲ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದುದರಿಂದ ಮೂರನೇ ಬಾರಿಗೆ ಅವರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆಯಲ್ಲಿ 147 ಮತದಾರರ ಪೈಕಿ 144 ವಕೀಲರು ಮತ ಚಲಾಯಿಸಿದರು. ಚುನಾವಣಾಧಿಕಾರಿಗಳಾಗಿ ಕಾಶಿನಾಥರಾವ್, ಬಿ.ಪಿ ಕೃಷ್ಣಮೂರ್ತಿ ಕಾರ್ಯನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.