ADVERTISEMENT

ಸೊರಬ: 6ರಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 6:28 IST
Last Updated 4 ಫೆಬ್ರುವರಿ 2023, 6:28 IST
ಪ್ರಕಾಶ್
ಪ್ರಕಾಶ್   

ಸೊರಬ: ಬಿಜೆಪಿ ಬೂತ್ ಅಭಿಯಾನ, ಸಂಕಲ್ಪ ವಿಜಯ ಅಭಿಯಾನ ಯಶಸ್ವಿಯಾಗಿದ್ದು,
ಫೆಬ್ರುವರಿ 6ರಂದು ಬಸ್ ನಿಲ್ದಾಣದ ಎದುರು ಪೇಜ್ ಪ್ರಮುಖರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಹೇಳಿದರು.

‘ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಾಗರದ ತಾಳಗುಪ್ಪ ಹೋಬಳಿ ಸೇರಿ ಒಟ್ಟು 239 ಬೂತ್‌ಗಳಲ್ಲಿ ತಲಾ 30 ಮತದಾರರ ಪಟ್ಟಿಗೆ ಪ್ರತಿ ಒಬ್ಬ ಪೇಜ್ ಪ್ರಮುಖರನ್ನು ನೇಮಕ ಮಾಡಲಾಗಿದೆ. ಅವರ ಉತ್ಸಾಹ ಮತ್ತಷ್ಟು ಹೆಚ್ಚಿಸಲು ಹಾಗೂ ಮತದಾರರನ್ನು ಪಕ್ಷದ ಪರ ಸೆಳೆಯಲು ಪೇಜ್ ಪ್ರಮುಖರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಪೇಜ್ ಪ್ರಮುಖರಿಗೆ ಪಕ್ಷದ ಚಿಹ್ನೆ ಇರುವ ಗುರುತಿನ ಚೀಟಿಯಲ್ಲಿ ಹೆಸರು, ವಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ನಮೂದಿಸಿದ್ದು, ಬಿಜೆಪಿ ಸಭೆ ಸಮಾರಂಭಗಳಲ್ಲಿ ಭಾಗವಹಿಸಲು ಅವರಿಗೆ ಮುಕ್ತವಾಗಿ ಅವಕಾಶ ಇರುತ್ತದೆ. ಬೆಳಿಗ್ಗೆ 10ಕ್ಕೆ ರಂಗನಾಥ ಸ್ವಾಮಿ ದೇವಸ್ಥಾನದಿಂದ‌ ಬೈಕ್ ರ‍್ಯಾಲಿ ನಡೆಯಲಿದ್ದು, ಪಕ್ಷದ ರಾಜ್ಯ ಘಟಕ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಮೆರವಣಿಗೆ ಮೂಲಕ ಸಭಾಂಗಣಕ್ಕೆ
ಕರೆತರಲಾಗುವುದು ಎಂದು ಹೇಳಿದರು.

ADVERTISEMENT

ರ‍್ಯಾಲಿಯಲ್ಲಿ 5 ಸಾವಿರ‌ ಬೈಕ್‌ಗಳಲ್ಲಿ 15 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ವೃತ್ತಿಕೊಪ್ಪ, ಬಗರ್‌ಹುಕುಂ ಸಮಿತಿ ಸದಸ್ಯ ದೇವೇಂದ್ರಪ್ಪ, ಪುರಸಭೆ ಮಾಜಿ ಅಧ್ಯಕ್ಷ ಎಂ.ಡಿ. ಉಮೇಶ್, ಕೃಷ್ಣಮೂರ್ತಿ ಕೊಡಕಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.