ಶಿವಮೊಗ್ಗ: ಸೊರಬ ತಾಲ್ಲೂಕು ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಬಾವಾಜಿ ಮಠದ ಯೋಗಿ ಅಭಯನಾಥ ಸ್ವಾಮೀಜಿ ನಾಪತ್ತೆಯಾಗಿದ್ದಾರೆ.
ಅಲ್ಲಿನ ಕಾಲಭೈರವೇಶ್ವರ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ 32 ವಯಸ್ಸಿನ ಈ ಸ್ವಾಮೀಜಿ ನಾಪತ್ತೆಯಾಗಿರುವುದು ಭಕ್ತ ಸಮೂಹದ ಆತಂಕಕ್ಕೆ ಕಾರಣವಾಗಿದೆ.
2016ರಲ್ಲಿ ಮಠದ ಸ್ವಾಮೀಜಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.ಕೆಲವು ತಿಂಗಳ ಹಿಂದೆ ಮಹಾರಾಷ್ಟ್ರದ ಮಠಕ್ಕೆ ಭೇಟಿ ನೀಡಲು ಹೋದವರು ಮರಳಿ ಬಂದಿಲ್ಲ ಎಂದು ಕಾಲಭೈರವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಅಧ್ಯಕ್ಷ ನಿಂಗಪ್ಪ ಭೈರಪ್ಪ ಭೈರಾಪುರ ಅವರು ಸೊರಬ ಠಾಣೆಗೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.