ADVERTISEMENT

ಮರು ಮೌಲ್ಯಮಾಪನ: ರಾಜ್ಯಕ್ಕೆ ದ್ವಿತೀಯ ಸ್ಥಾನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 17:49 IST
Last Updated 5 ಸೆಪ್ಟೆಂಬರ್ 2020, 17:49 IST
ಆರ್.ಕಾವ್ಯ
ಆರ್.ಕಾವ್ಯ   

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದ ಮರು ಮೌಲ್ಯಮಾಪನದ ಬಳಿಕ ಶಿವಮೊಗ್ಗದ ಪ್ರಿಯದರ್ಶಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆರ್. ಕಾವ್ಯ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಾವ್ಯ ಮೊದಲಿನ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಗಳಿಸಿದ್ದರು. ಹಿಂದಿ ಹಾಗೂ ವಿಜ್ಞಾನ ವಿಷಯದಲ್ಲಿ ನಿರೀಕ್ಷೆಯಷ್ಟು ಅಂಕ ಬಾರದ ಕಾರಣ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು, 625ಕ್ಕೆ 624 ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಶಾಲೆಯ ಕಾರ್ಯದರ್ಶಿಗಳು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.