ಶಿವಮೊಗ್ಗ: ಗೋಪಾಳದ ಸಹನ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಅ.8ರಿಂದ 10ರ ವರೆಗೆ ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಶಾರದಾ ದೇವಿ ಅಂಧರ ವಿಕಾಸ ಕೇಂದ್ರದ ಕ್ರೀಡಾಂಗಣದಲ್ಲಿ ನಡೆಯಲಿದೆ.
3 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಗೆ ₹ 15 ಸಾವಿರ ಪ್ರವೇಶ ಶುಲ್ಕವಿದೆ. ಪ್ರತಿ ಪಂದ್ಯ 6 ಓವರ್ಗಳಿಗೆ ಸೀಮಿತವಾಗಿದೆ. ಈಗಾಗಲೇ 16 ತಂಡಗಳು ನೋಂದಣಿ ಮಾಡಿಕೊಂಡಿವೆ ಎಂದು ಸಂಘಟಕರು ತಿಳಿಸಿದ್ದಾರೆ.
ಮೊದಲ ಬಹುಮಾನ ₹ 1.50 ಲಕ್ಷ , ದ್ವಿತೀಯ ಬಹುಮಾನ₹ 75 ಸಾವಿರ ನಿಗದಿ ಮಾಡಲಾಗಿದೆ. ಅ.8ರಂದು ಬೆಳಿಗ್ಗೆ ಪಂದ್ಯಾವಳಿಯನ್ನುಡಿ.ಎಸ್. ಅರುಣ್ ಉದ್ಘಾಟಿಸುವರು. ತುಂಗಾನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಎಂ.ಎಸ್. ದೀಪಕ್, ಕೋಟೆ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ್, ಮ್ಯಾಕ್ಸ್ ಆಸ್ಪತ್ರೆಯ ಡಾ. ತೇಜಸ್ವಿ, ಸಹನಾ ಕ್ರಿಕೆಟರ್ಸ್ ಸಂಸ್ಥಾಪಕ ಬಸವೇಗೌಡ ಭಾಗವಹಿಸಲಿದ್ದಾರೆ. ಪಾಲಿಕೆ ಸದಸ್ಯ ಎನ್.ಎಸ್. ಮಂಜುನಾಥ್ ವಹಿಸಲಿದ್ದಾರೆ.
ಅ.10ರಂದು ನಡೆಯುವ ಸಮಾರೋಪದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಎಸ್.ಪಿ.ದಿನೇಶ್, ಎಸ್. ಶಿವಕುಮಾರ್, ಹಬೀಬ್ ಖಾನ್, ಎನ್.ಎಸ್. ಮಂಜುನಾಥ್ ಭಾಗವಹಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.