ADVERTISEMENT

ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 5:51 IST
Last Updated 13 ಏಪ್ರಿಲ್ 2021, 5:51 IST

ಹೊಳೆಹೊನ್ನೂರು: ಪಟ್ಟಣ ಸಮೀಪದ ಹೊಳೆಭೈರನಹಳ್ಳಿ ಗ್ರಾಮದಲ್ಲಿ ಸೋಮವಾರ 9ನೇ ತರಗತಿವಿದ್ಯಾರ್ಥಿ ಭದ್ರಾನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾನೆ.

ಅರುಣ (14) ನಾಪತ್ತೆಯಾದ ವಿದ್ಯಾರ್ಥಿ. ಈಜಲು ಹೋಗಿದ್ದಾಗ ಬಾಲಕ ಮುಳುಗಿದ್ದಾನೆ. ನದಿ ಪಾತ್ರದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯರು ಮುಳುಗುತ್ತಿರುವುದನ್ನು ಕಂಡು ನೀರಿನಲ್ಲಿ ಸೀರೆ ಬಿಟ್ಟು ಕಾಪಾಡಲು ಪ್ರಯತ್ನಿಸಿದ್ದಾರೆ. ವ್ಯಕ್ತಿಯೊಬ್ಬರು ನದಿಗೆ ಹಾರಿ ಕಾಪಾಡಲು ಪ್ರಯತ್ನಿಸಿದರೂ ಬಾಲಕ ಸಿಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಗ್ನಿ ಶಾಮಕದಳದ ಸಿಬ್ಬಂದಿ ಬಾಲಕನ ಪತ್ತೆ ಕಾರ್ಯ ನಡೆಸಿದರು. ರಾತ್ರಿಯಾದ ಕಾರಣ ಕಾರ್ಯಾಚರಣೆ ನಾಳೆ ಮುಂದುರಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್‍ಐ ಎಸ್. ಸುರೇಶ್ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.