ADVERTISEMENT

ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2021, 4:41 IST
Last Updated 14 ಅಕ್ಟೋಬರ್ 2021, 4:41 IST

ಕೋಣಂದೂರು: ಸಮೀಪದ ಅಕ್ಲಾಪುರದಲ್ಲಿ ವ್ಯಕ್ತಿಯೊಬ್ಬರು ಬುಧವಾರ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬೆಳಿಗ್ಗೆ ಆತ್ಮಹತ್ಯೆ
ಮಾಡಿಕೊಂಡಿದ್ದಾರೆ.

ಗ್ರಾಮದ ರಾಘವೇಂದ್ರ (40) ಆತ್ಮಹತ್ಯೆ ಮಾಡಿಕೊಂಡವರು. ಮನೆಯಿಂದ ದತ್ತರಾಜಪುರಕ್ಕೆ ಹೋಗುವುದಾಗಿ ಹೇಳಿದ್ದ ರಾಘವೇಂದ್ರ ಅವರು ಮಾರ್ಗ ಮಧ್ಯೆ ಬೈಕ್ ನಿಲ್ಲಿಸಿ
ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉರಿಯುತ್ತಿದ್ದ ಬೈಕ್ ಮತ್ತು ದೇಹವನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ
ನೀಡಿದ್ದಾರೆ.

ಬೈಕ್ ಬಾಕ್ಸ್‌ನಲ್ಲಿದ್ದ ಸೀಮೆಎಣ್ಣೆ ಕ್ಯಾನ್ ಪಕ್ಕದಲ್ಲೇ ಬಿದ್ದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.