ADVERTISEMENT

ಪ್ರಮುಖ ಪ್ರವಾಸಿ ತಾಣವಾಗಿ ಅರಸಾಳು ನಿಲ್ದಾಣ: ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ

ವಿವಿಧ ರೈಲ್ವೆ ಕಾಮಗಾರಿ ಲೋಕಾರ್ಪಣೆ ಮಾಡಿದ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 13:44 IST
Last Updated 8 ಆಗಸ್ಟ್ 2020, 13:44 IST
ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.   

ಶಿವಮೊಗ್ಗ: ಅರಸಾಳು ರೈಲುನಿಲ್ದಾಣವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ರೂಪಿಸಲಾಗಿದೆ.28ಬೋಗಿಗಳರೈಲು ನಿಲ್ಲುವ ಸೌಲಭ್ಯ ಕಲ್ಪಿಸಲಾಗಿದೆ ಎಂದುರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.

ಶಿವಮೊಗ್ಗ ಪೆಸಿಟ್‌ ಕಾಲೇಜು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿವರ್ಚುವಲ್ವೀಡಿಯೊಮೂಲಕ ನಗರದ ಮುಖ್ಯ ರೈಲುನಿಲ್ದಾಣದ ಲಿಫ್ಟ್‌ಹಾಗೂ ನವೀಕೃತ ಅರಸಾಳುನಿಲ್ದಾಣ, ವಿಸ್ತರಣೆಯಾದ ಪ್ಲಾಟ್‌ಫಾರಂ,ಮ್ಯೂಸಿಯಂ ಮಾಲ್ಗುಡಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲುಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಸ್ವಾಧೀನಕ್ಕೆ ₹ 245 ಕೋಟಿ ವೆಚ್ಚವಾಗಲಿದೆ.ಇನ್ನೆರಡು ತಿಂಗಳಲ್ಲಿ ಭೂಸ್ವಾಧೀನ ಪೂರ್ಣಗೊಳ್ಳಲಿದೆ. ₹ 994 ಕೋಟಿ ವೆಚ್ಚದಲ್ಲಿ ಹೊಸ ರೈಲು ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಉಚಿತವಾಗಿ ಭೂಮಿ ಒದಗಿಸುತ್ತಿದ್ದಾರೆ. ರಾಜ್ಯ ಸರ್ಕಾರದಿಂದಶೇ 50ರಷ್ಟು ಯೋಜನಾ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ. ಅದೇ ರೀತಿ ದಾವಣಗೆರೆ-ಬೆಂಗಳೂರುಮಧ್ಯೆದ್ವಿಪಥ ಮಾರ್ಗನಿರ್ಮಾಣಕ್ಕೂ ಜಮೀನು ಒದಗಿಸಲಾಗುತ್ತಿದೆ.ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ADVERTISEMENT

ಸಂಸದಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗ ರೈಲುನಿಲ್ದಾಣದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಎರಡು ಲಿಫ್ಟ್‍ಗಳನ್ನು ನಿರ್ಮಿಸಲಾಗಿದೆ. ಇದರಿಂದಹಿರಿಯ ನಾಗರಿಕರಿಗೆ, ಅಂಗವಿಕಲ, ಅಶಕ್ತಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು.

ಶಿವಮೊಗ್ಗ-ಹರಿಹರ ರೈಲು ಮಾರ್ಗ, ಬೀರೂರು-ಶಿವಮೊಗ್ಗದ್ವಿಪಥ ಮಾರ್ಗ, ತಾಳಗುಪ್ಪ-ಸಿದ್ದಾಪುರ ಹಾಗೂ ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬೇಕಿದೆ. ಹಲವುವರ್ಷಗಳಿಂದ ನನೆಗುದಿಗೆ ಬಿದ್ದಿರುವಶಿವಮೊಗ್ಗದ ನೂರು ಅಡಿ ವರ್ತುಲ ರಸ್ತೆಯೂಎರಡುತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ನಾಲ್ಕು ರೈಲುಸೇತುವೆ ನಿರ್ಮಾಣ: ₹ 100 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ವಿದ್ಯಾನಗರ, ಭದ್ರಾವತಿಯ ಜೆಡಿ ಕಟ್ಟೆ, ಕಾಶಿಪುರ ಮತ್ತು ಸವಳಂಗ ರಸ್ತೆಯಲ್ಲಿ ರೈಲು ಮೇಲು ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ.ಕಾಮಗಾರಿ ಆದಷ್ಟು ಬೇಗನೆ ಆರಂಭವಾಗಲಿದೆ ಎಂದುವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.