ADVERTISEMENT

ನಟ ಅಭಿಷೇಕ್ ಅಂಬರೀಷ್‌ ಬಿಜೆಪಿ ಸೇರ್ಪಡೆಗೆ ಮಾತುಕತೆ: ಸಚಿವ ನಾರಾಯಣಗೌಡ

ಸಚಿವ ಕೆ.ಸಿ. ನಾರಾಯಣಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 21:33 IST
Last Updated 25 ಜನವರಿ 2023, 21:33 IST
 ಅಭಿಷೇಕ್ ಅಂಬರೀಷ್‌
ಅಭಿಷೇಕ್ ಅಂಬರೀಷ್‌    

ಶಿವಮೊಗ್ಗ: ‘ನಟ ಅಭಿಷೇಕ್ ಅಂಬರೀಷ್‌ ಅವರ ಪಕ್ಷ ಸೇರ್ಪಡೆ ಬಗ್ಗೆ ಮಂಡ್ಯದಲ್ಲಿ ಮಾತುಕತೆ ನಡೆದಿದೆ. ಮುಂದಿನ ಎರಡು ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ’ ಎಂದು ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದರು.

ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಅಭಿಷೇಕ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಿದೆ. ಅವರು ಪಕ್ಷಕ್ಕೆ ಬಂದರೆ ಒಳ್ಳೆಯದು. ಈ ಬಗ್ಗೆ ಮಂಡ್ಯ ಸಂಸದೆ, ಅಭಿಷೇಕ್ ಅವರ ತಾಯಿ ಸುಮಲತಾ ಅಂಬರೀಷ್‌ ಅವರೊಂದಿಗೂ ಮಾತುಕತೆ ನಡೆದಿದೆ’ ಎಂದರು.

‘ಅಂಬರೀಷ್‌ ಮಂಡ್ಯ ದವರು. ಅವರ ಪುತ್ರ ಅಭಿಷೇಕ್ ಬಿಜೆಪಿ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಒಳ್ಳೆಯದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.