ADVERTISEMENT

ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ‌ಕಾರ್ತಿಕ ದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 5:46 IST
Last Updated 6 ಡಿಸೆಂಬರ್ 2021, 5:46 IST
ಶಿಕಾರಿಪುರ ಹುಚ್ಚರಾಯಸ್ವಾಮಿ ಕೆರೆ ಪಕ್ಕದ ಪುಷ್ಕರಣಿಯಲ್ಲಿ ಶನಿವಾರ ಕಾರ್ತಿಕ ದೀಪೋತ್ಸವ ನಡೆಯಿತು.
ಶಿಕಾರಿಪುರ ಹುಚ್ಚರಾಯಸ್ವಾಮಿ ಕೆರೆ ಪಕ್ಕದ ಪುಷ್ಕರಣಿಯಲ್ಲಿ ಶನಿವಾರ ಕಾರ್ತಿಕ ದೀಪೋತ್ಸವ ನಡೆಯಿತು.   

ಶಿಕಾರಿಪುರ: ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.

ದೀಪೋತ್ಸವದ ಪ್ರಯುಕ್ತ ತೇರುಬೀದಿ ಹಾಗೂ ದೇವಸ್ಥಾನ ಸಮೀಪದ ರಸ್ತೆಗಳಲ್ಲಿ ಪಲ್ಲಕ್ಕಿ ಮೂಲಕ ಹುಚ್ಚರಾಯಸ್ವಾಮಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ತೇರುಬೀದಿ ನಿವಾಸಿಗಳು ಮನೆ ಮುಂಭಾಗ ಹಾಗೂ ರಸ್ತೆಯಲ್ಲಿ ದೀಪಗಳನ್ನು ಹಚ್ಚಿದ್ದರು. ಇದೇ ಸಂದರ್ಭ ಮಾರಿಕಾಂಬಾ ಗದ್ದುಗೆಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ಹುಚ್ಚರಾಯಸ್ವಾಮಿ ಕೆರೆ ಪಕ್ಕದ ಪುಷ್ಕರಣಿ ಸುತ್ತಲೂ ಭಕ್ತರು ದೀಪ ಹಚ್ಚಿದ್ದು, ಜನರನ್ನು ಆಕರ್ಷಿಸಿತು. ಕಾರ್ತಿಕ ದೀಪೋತ್ಸವ ಪ್ರಯುಕ್ತ ನೂರಾರು ಭಕ್ತರು ಹುಚ್ವರಾಯಸ್ವಾಮಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದರು. ಮಹಿಳೆಯರು ದೇವರ ಹಾಡುಗಳ ಗಾಯನ ನಡೆಸಿಕೊಟ್ಟರು. ಇದೇ ಸಂದರ್ಭ ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.