ಶಿವಮೊಗ್ಗ: ಇಲ್ಲಿನ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಎಳ್ಳಮಾವಾಸ್ಯೆ ಅಂಗವಾಗಿ ಭಾನುವಾರ ಶಕ್ತಿ ದೇವತೆಗಳ ಸಮಾಗಮ ವಿಜೃಂಭಣೆಯಿಂದ ನೆರವೇರಿತು.
ನಗರದ ಎಲ್ಲ ಶಕ್ತಿ ದೇವತೆಗಳನ್ನು ಬೆಳಿಗ್ಗೆಯೇ ದೇವಾಲಯಕ್ಕೆ ಮೆರವಣಿಗೆ ಮೂಲಕ ತಂದು, ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
ಮಧ್ಯಾಹ್ನ ಮಹಾಮಂಗಳಾರತಿ ನಂತರ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದಿಂದ ರಾತ್ರಿವರೆಗೂ ದೇವತೆಗಳಿಗೆ ಮಹಿಳೆಯರು ಉಡಿ ಸಮರ್ಪಿಸಿದರು. ರಾತ್ರಿ ಉತ್ಸವ ಮೂರ್ತಿಗಳು ಪೂಜೆ ಸ್ವೀಕರಿಸಿ ಸ್ವಸ್ಥಾನಕ್ಕೆ ಮರಳಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.