ADVERTISEMENT

ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳ ಸಾವು

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 16:16 IST
Last Updated 5 ಜೂನ್ 2020, 16:16 IST

ಶಿವಮೊಗ್ಗ: ಪಾಲಿಕೆ ವ್ಯಾಪ್ತಿಯ ಸೋಮಿನಕೊಪ್ಪ ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ಗುರುವಾರ ಸಂಜೆ ಮೃತಪಟ್ಟಿದ್ದಾರೆ.

ಪೂಜಾ (10) ಹಾಗೂ ಮಾಲತೇಶ್ (9) ಮೃತಪಟ್ಟ ಸಹೋದರಿ ಹಾಗೂ ಸಹೋದರ.

ಗ್ರಾಮಸ್ಥರು ಕೆರೆಯಲ್ಲಿ ಮೀನು ಹಿಡಿಯುತ್ತಿದ್ದರು. ಅದನ್ನು ಗಮನಿಸಿದ ಮಕ್ಕಳು ಮೀನುಹಿಡಿಯಲು ಮುಂದಾಗಿದ್ದಾರೆ. ಆಗ ಕೆರೆಗೆ ಬಿದ್ದಿದ್ದಾರೆ.ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ 15 ತಾಸುಗಳ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದರು.

ADVERTISEMENT

ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.