ADVERTISEMENT

ವಸತಿಗೃಹದಲ್ಲಿ ನೇಣು ಹಾಕಿಕೊಂಡು ಇಬ್ಬರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 6:53 IST
Last Updated 27 ಸೆಪ್ಟೆಂಬರ್ 2021, 6:53 IST

ಸಾಗರ: ಇಲ್ಲಿನ ಜೋಗ ರಸ್ತೆಯ ಹಳೆ ಖಾಸಗಿ ಬಸ್ ನಿಲ್ದಾಣದ ಎದುರಿನ ವಸತಿಗೃಹವೊಂದರಲ್ಲಿ ನೇಣು ಹಾಕಿಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಕಿಗೆ ಬಂದಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23), ಹನುಮಂತ (28) ಆತ್ಮಹತ್ಯೆ ಮಾಡಿಕೊಂಡವರು. ಸಂತೋಷ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಸಂತೋಷ್ ಹಾಗೂ ಹನುಮಂತ ಅವರು ಸೆ.24ರಂದು ತಡರಾತ್ರಿ ಇಲ್ಲಿಗೆ ಬಂದು ವಸತಿಗೃಹದಲ್ಲಿ ಕೊಠಡಿ ಪಡೆದಿದ್ದಾರೆ. ಶನಿವಾರ ಮಧ್ಯಾಹ್ನ ಊಟ ಮಾಡಿದ ನಂತರ ಕೊಠಡಿಗೆ ಸೇರಿಕೊಂಡ ಅವರು ನಂತರ ಹೊರಬಂದಿರಲಿಲ್ಲ.

ADVERTISEMENT

ಭಾನುವಾರ ಬೆಳಿಗ್ಗೆ ವಸತಿಗೃಹದ ಸಿಬ್ಬಂದಿ ಕೊಠಡಿಯ ಬಾಗಿಲು ಬಡಿದರೂ ತೆರೆದಿಲ್ಲ.ಅನುಮಾನಗೊಂಡ ವಸತಿಗೃಹದ ವ್ಯವಸ್ಥಾಪಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಬಂದು ಕೊಠಡಿಯನ್ನು ತೆರೆದಾಗ ಇಬ್ಬರೂ ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.