ADVERTISEMENT

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 11:50 IST
Last Updated 24 ಸೆಪ್ಟೆಂಬರ್ 2020, 11:50 IST

ಶಿವಮೊಗ್ಗ: ರಿಪ್ಪನ್‌ಪೇಟೆ–ಕೋಣಂದೂರು ಮಾರ್ಗದ ಸುಣ್ಣದ ಬಸ್ತಿ ಬಳಿ ಗುರುವಾರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಿಪ್ಪನ್‌ಪೇಟೆ ವಿನಾಯಕ ನಗರದ ರಾಘವೇಂದ್ರ ಭಟ್‌ (48), ಅವರ ಪುತ್ರ ಲೋಹಿತ್ (14), ಅತ್ತೆ ಅಂಬಿಕಾ (65) ಮೃತಪಟ್ಟವರು.

ಧರ್ಮಸ್ಥಳಕ್ಕೆ ಹೋಗಿ ವಾಪಸ್‌ ಬರುವಾಗ ಈ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗೆ ವಿದ್ಯುತ್ ಹರಿದು ಮೂವರಿಗೆ ತಗುಲಿದೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.