ADVERTISEMENT

ಶಿವಮೊಗ್ಗ: ಮೂವರಿಗೆ ಎಚ್‌1ಎನ್‌1 ಸೋಂಕು

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 4:25 IST
Last Updated 29 ಜುಲೈ 2022, 4:25 IST

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಎಚ್‌1ಎನ್‌1 ಪ್ರಕರಣ ಪತ್ತೆಯಾಗಿವೆ. ಶಿವಮೊಗ್ಗ ಹಾಗೂ ಭದ್ರಾವತಿಯ ತಲಾ ಒಬ್ಬರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

ಕೆಮ್ಮು, ಶೀತ, ನೆಗಡಿಯ ಕಾರಣಕ್ಕೆ ಚಿಕಿತ್ಸೆಗೆ ಬಂದಿದ್ದವರಲ್ಲಿ ಪರೀಕ್ಷೆ ನಡೆಸಿದಾಗ ಎಚ್‌1ಎನ್‌1 ಸೋಂಕು ಪತ್ತೆಯಾಗಿದೆ. ಎಲ್ಲರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜೀವಕ್ಕೆ ಅಪಾಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಸೋಂಕು ಕಾಣಿಸಿ ಕೊಂಡರೂ ಈಗ ಟ್ಯಾಮಿಫ್ಲೂ ಮಾತ್ರೆ ಸೇವಿಸಿದರೆ 24 ಗಂಟೆಗಳಲ್ಲಿ ನಿಯಂತ್ರಣಕ್ಕೆ ಬರುತ್ತದೆ. 10 ವರ್ಷಗಳ ಹಿಂದೆ ಇದ್ದ ಭಯದ ಪರಿಸ್ಥಿತಿ ಈಗ ಇಲ್ಲ. ಔಷಧಿ ಯೂ ಲಭ್ಯವಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.