ADVERTISEMENT

ತೀರ್ಥಹಳ್ಳಿ | ತುಂಗೆಗೆ ಬಾಗಿನ ಅರ್ಪಿಸಿದ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 24 ಜುಲೈ 2023, 15:51 IST
Last Updated 24 ಜುಲೈ 2023, 15:51 IST
ತೀರ್ಥಹಳ್ಳಿ ಪಟ್ಟಣದಲ್ಲಿ ಶಾಸಕ ಆರಗ ಜ್ಞಾನೇಂದ್ರ ತುಂಗಾ ನದಿಗೆ ಸೋಮವಾರ ಬಾಗಿನ ಅರ್ಪಿಸಿದರು
ತೀರ್ಥಹಳ್ಳಿ ಪಟ್ಟಣದಲ್ಲಿ ಶಾಸಕ ಆರಗ ಜ್ಞಾನೇಂದ್ರ ತುಂಗಾ ನದಿಗೆ ಸೋಮವಾರ ಬಾಗಿನ ಅರ್ಪಿಸಿದರು   

ತೀರ್ಥಹಳ್ಳಿ: ಪಟ್ಟಣದ ರಾಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುತ್ತಿರುವ ತುಂಗಾ ನದಿಗೆ ಶಾಸಕ ಆರಗ ಜ್ಞಾನೇಂದ್ರ ಸೋಮವಾರ ಬಾಗಿನ ಅರ್ಪಿಸಿದರು.

ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನದಿ ಪಾತ್ರದ ಜನರು ಯಾವುದೇ ಕಾರಣಕ್ಕೂ ನೀರಿಗೆ ಇಳಿಯಬಾರದು ಎಂದ ಅವರು, ರೈತರಿಗೆ ಸಮೃದ್ಧ ಬೆಳೆ ಹಾಗೂ ಉತ್ತಮ ಬೆಲೆ ಸಿಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲ ಶೆಟ್ಟಿ, ಉಪಾಧ್ಯಕ್ಷ ರೆಹಮತ್‌ ಉಲ್ಲಾ ಅಸಾದಿ, ಡಿವೈಎಸ್‌ಪಿ ಗಜಾನನ ಸುತಾರ, ತಹಶೀಲ್ದಾರ್‌ ಅಮೃತ್‌ ಅತ್ರೇಶ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.