ADVERTISEMENT

ಶಿವಮೊಗ್ಗ: ಮಾಚೇನಹಳ್ಳಿ ಬಳಿ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ, ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 4:24 IST
Last Updated 27 ಜನವರಿ 2022, 4:24 IST
   

ಶಿವಮೊಗ್ಗ: ಮಾಚೇನಹಳ್ಳಿ ಬಳಿ ಗುರುವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಮೃತಪಟ್ಟವರು.

ಮೃತರು ಕಾರಿನಲ್ಲಿ ಭದ್ರಾವತಿಯಿಂದ ತೀರ್ಥಹಳ್ಳಿಗೆ ಹೊರಟಿದ್ದರು. ಲಾರಿ ಶಿವಮೊಗ್ಗದಿಂದ ಭದ್ರಾವತಿ ಕಡೆ ಸಾಗುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.