ADVERTISEMENT

ತುಂಗಾ ನದಿಯಲ್ಲಿ ಈಜಲು ಹೋದ ಉಪನ್ಯಾಸಕ ಸಾವು: ಮತ್ತೊಬ್ಬರಿಗಾಗಿ ಹುಡುಕಾಟ

​ಪ್ರಜಾವಾಣಿ ವಾರ್ತೆ
Published 18 ಜೂನ್ 2023, 7:48 IST
Last Updated 18 ಜೂನ್ 2023, 7:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ.

ತೀರ್ಥಹಳ್ಳಿ ತಾಲ್ಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಗೆ ಭಾನುವಾರ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದರು.

ಅವರಲ್ಲಿ ಬಾಲಾಜಿ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ADVERTISEMENT

ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನೀರು ಪಾಲಾದವರ ಹುಡುಕಾಟದಲ್ಲಿ ತೊಡಗಿದ್ದಾರೆ.

ಓದಿ... ಅಶ್ಲೀಲ ವಿಡಿಯೊ ಹರಿಬಿಟ್ಟ ಪ್ರಕರಣ: ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಪ್ರತೀಕ್ ಗೌಡ ಬಂಧನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.