ADVERTISEMENT

ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2023, 15:55 IST
Last Updated 19 ಸೆಪ್ಟೆಂಬರ್ 2023, 15:55 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಶಿವಮೊಗ್ಗ: ಇಲ್ಲಿನ ಕುರುಬರ ಪಾಳ್ಯದ ಬಳಿ ತುಂಗಾ ನದಿಯಲ್ಲಿ ಸೋಮವಾರ ಮೀನು ಹಿಡಿಯಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸವಾಯಿ ಪಾಳ್ಯದ ಮೊಹಮ್ಮದ್ ಫೈಸಲ್ (19) ಹಾಗೂ ಇಲಿಯಾಸ್ ನಗರದ ಅಂಜುಂ ಖಾನ್ (19) ನೀರಿನಲ್ಲಿ ಮುಳುಗಿದವರು. ಮೊಹಮ್ಮದ್ ಹಾಗೂ ಅಂಜುಂ ಇಬ್ಬರೂ ಮೀನಾಕ್ಷಿ ಭವನದ ಬಳಿಯ ಕಾಲೇಜೊಂದರ ಬಿಸಿಎ ಮೊದಲ ವರ್ಷದ ವಿದ್ಯಾರ್ಥಿಗಳು.

ADVERTISEMENT

ಕಾಲೇಜಿಗೆ ರಜೆ ಇದ್ದ ಕಾರಣ ಇಬ್ಬರೂ ತುಂಗಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದವರು ಶೋಧ ಕಾರ್ಯ ನಡೆಸಿ ಶವ ಹೊರಗೆ ತೆಗೆದರು. ಈ ಬಗ್ಗೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಸೊರಬ: ತಾಲ್ಲೂಕಿನ ಕುಂಶಿ ಗ್ರಾಮದ ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸುವ ವೇಳೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಭಾನುವಾರ ಮೃತಪಟ್ಟಿದ್ದಾರೆ.

ಗ್ರಾಮದ ಮಲ್ಲಿಕಾರ್ಜುನ ಗೌಡ (32) ಮೃತ ವ್ಯಕ್ತಿ. ಸಂಜೆ ಜಮೀನಿನಿಂದ ಮನೆಗೆ ಬರುವಾಗ ಕೆರೆಯಲ್ಲಿ ನೀರು ಕುಡಿಸುವ ವೇಳೆ ಘಟನೆ ನಡೆದಿದೆ.

ಅವರಿಗೆ ಪತ್ನಿ, ತಂದೆ, ತಾಯಿ, ಅಕ್ಕ ಇದ್ದಾರೆ. ಅಗ್ನಿಶಾಮಕ ದಳದ ಠಾಣಾಧಿಕಾರಿ ಮಹಾಬಲೇಶ್ವರ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆರೆಯಿಂದ ಶವವನ್ನು ಹೊರಕ್ಕೆ ತೆಗೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.