ಶಿವಮೊಗ್ಗ: ವಾಲ್ಮೀಕಿ ಸಮುದಾಯಒಳಗೊಂಡ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಲು ಸರ್ಕಾರತಕ್ಷಣ ಕ್ರಮ ಕೈಗೊಳ್ಳಬೇಕುಎಂದು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಆಗ್ರಹಿಸಿದರು.
ವಿದ್ಯಾನಗರ ಗಣಪತಿ ದೇವಸ್ಥಾನದ ಸಮುದಾಯ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂಹೆಚ್ಚು ವಾಲ್ಮೀಕಿ ಸಮುದಾಯದಜನರು ಇದ್ದಾರೆ.ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರಕುತ್ತಿಲ್ಲ. ಈಗ ಕೇವಲ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 3ರಷ್ಟು ಮೀಸಲಾತಿ ಸಿಗುತ್ತಿದೆ. ಈ ಪ್ರಮಾಣ ಶೇ 7.5ಕ್ಕೆ ಹೆಚ್ಚಿಸಬೇಕು. ಜತೆಗೆ ಪರಿಶಿಷ್ಟ ಜಾತಿಯಶೇ 15ರಷ್ಟು ಮೀಸಲಾತಿ ಪ್ರಮಾಣವನ್ನು ಶೇ 17ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ಹೆಚ್ಚಳಕ್ಕೆ ಹೋರಾಟ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಲು ಸರ್ಕಾರ ವಿಳಂಬ ಮಾಡುತ್ತಿದೆ.ಹಾಗಾಗಿ,ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ. ಈ ಸಂಬಂಧ ಅ.19ರವರೆಗೂ ರಾಜ್ಯದೆಲ್ಲೆಡೆ ಪ್ರವಾಸ ನಡೆಸಿ, ಜನಾಂಗದವರ ಜತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
20ಕ್ಕೆಮುಖಂಡರ ಸಭೆ:ಬೆಂಗಳೂರಿನಲ್ಲಿಅ.20ರಂದು ವಾಲ್ಮೀಕಿ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ. 21ರಿಂದ 30ರವರೆಗೆ ಫ್ರೀಡಂ ಪಾರ್ಕ್ನಲ್ಲಿ ಧರಣಿ ಕುಳಿತುಕೊಳ್ಳಲಾಗುವುದು. 30 ರಂದು ಬೆಂಗಳೂರು ಚಲೋ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಗಮನಸೆಳೆಯಲಾಗುವುದು. ವಾಲ್ಮೀಕಿ ಜಯಂತಿದಿನ ಮುಖ್ಯಮಂತ್ರಿ ಆಹ್ವಾನಿಸಿ ಅಹವಾಲು ತಲುಪಿಸಲಾಗುವುದು ಎಂದರು.
ಜಿಲ್ಲಾ ನಾಯಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಆರ್.ಲಕ್ಷ್ಮಣ್, ಕಾರ್ಯದರ್ಶಿ ಎಂ.ಆರ್.ಮೋಹನ್, ಕೋಶಾಧ್ಯಕ್ಷ ಕೆ.ಆರ್.ಸೀತಾರಾಮನಾಯಕ್, ಎಚ್.ಎಸ್.ಬಸವರಾಜಪ್ಪ, ಗಿರೀಶ್ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.