ADVERTISEMENT

ರಿಪ್ಪನ್‌ಪೇಟೆ: ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 3:56 IST
Last Updated 5 ನವೆಂಬರ್ 2020, 3:56 IST

ರಿಪ್ಪನ್‌ಪೇಟೆ: ಪಟ್ಟಣದ ನಾಡಕಚೇರಿಯ ಬೆಳ್ಳೂರು ವೃತ್ತ ಹಾಗೂ ಕೆರೆಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಬುಧವಾರ ₹ 1 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ದಾನಪತ್ರದ ಖಾತೆ ಬದಲಾವಣೆ ಮಾಡಿಕೊಡಲು ₹ 30 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಕೆದಲಗುಡ್ಡೆ ನಿವಾಸಿ ಸೇಲ್ವಿ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ರಾಘವೇಂದ್ರ ಹಾಗೂ ಸಹಾಯಕ ಅಣ್ಣಪ್ಪ ಅವರನ್ನು ಎಸಿಬಿ ಡಿವೈಎಸ್ಪಿ ಲೋಕೇಶ್ ತಂಡ ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT