
ಕೋಣಂದೂರು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಗುರುವಾರ ನಡೆದ ‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸೆಯನ್ನು ತಡೆಗಟ್ಟೋಣ’ ಎಂಬ ಜಾಗತಿಕ ಜಾಗೃತಿ ಅಭಿಯಾನ ಸೇವಾ ಕಾರ್ಯಕ್ರಮ ನಡೆಯಿತು. ಹಿಂಸೆಮುಕ್ತ ಸಮಾಜ ನಿರ್ಮಾಣದ ಸಂದೇಶವನ್ನು ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.
ಶಾಲೆಯ 8 ಜನ ಬಿಸಿ ಊಟದ ಅಡುಗೆಯವರಿಗೆ ಸಮವಸ್ತ್ರ ವಿತರಿಸಲಾಯಿತು. ನೀಡ್ ಬೇಸ್ ಇಂಡಿಯಾ ಅವರ ಸಹಕಾರದಿಂದ ವಿದ್ಯಾರ್ಥಿಗಳಿಗೆ ನೋಟ್ಬುಕ್ಗಳನ್ನು ವಿತರಿಸಲಾಯಿತು.
ಕ್ಲಬ್ನ ಅಧ್ಯಕ್ಷೆ ಇಂದು ನಾಗಭೂಷಣ್, ಕಾರ್ಯದರ್ಶಿ ಪೂರ್ಣಿಮಾ ಶ್ರೀಕಾಂತ್, ಉಪ ಪ್ರಾಂಶುಪಾಲರಾದ ಸೌಮ್ಯಾ, ಎಸ್ಡಿಎಂಸಿ ಅಧ್ಯಕ್ಷ ಶ್ರೀಕಾಂತ್, ನೀಡ್ ಬೇಸ್ ಇಂಡಿಯಾದ ಸಂಚಾಲಕ ಆದರ್ಶ ಹುಂಚದಕಟ್ಟೆ ಹಾಗೂ ಸದಸ್ಯರು, ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.