ADVERTISEMENT

ಶುಕ್ರವಾರ ನೀರು ಪೂರೈಕೆ ಸುಗಮ

​ಪ್ರಜಾವಾಣಿ ವಾರ್ತೆ
Published 16 ಮೇ 2019, 12:42 IST
Last Updated 16 ಮೇ 2019, 12:42 IST

ಶಿವಮೊಗ್ಗ: ನಗರಕ್ಕೆ ನೀರು ಸರಬರಾಜು ಮಾಡುವ ಕೆಆರ್ ನೀರು ಸರಬರಾಜು ಕೇಂದ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೆಲವು ಬಡಾವಣೆಗಳಿಗೆ ನೀರು ಪೂರೈಸುವಲ್ಲಿ ವ್ಯತ್ಯಯವಾಗಿದೆ.

ನಗರ ಪಾಲಿಕೆ ಮೇಯರ್ ಲತಾ ಗಣೇಶ್ ಹಾಗೂ ಉಪ ಮೇಯರ್ ಎಸ್‌.ಎನ್‌. ಚನ್ನಬಸಪ್ಪ ಅವರು ಗುರುವಾರ ನೀರು ಸರಬರಾಜು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಜತೆ ಚರ್ಚಿಸಿ, ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.

ಪಾಲಿಕೆ ತಾಂತ್ರಿಕ ಸಿಬ್ಬಂದಿ ರಾತ್ರಿಯ ಒಳಗೆ ಸಮಸ್ಯೆ ಬಗೆಹರಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನದ ನಂತರ ನೀರು ಪೂರೈಕೆ ಎಂದಿನಂತೆ ಇರುತ್ತದೆ ಎಂದು ಮೇಯರ್ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.