ADVERTISEMENT

ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ರಾಜ್ಯಕ್ಕೆ ಎರಡು ಸ್ಥಾನದ ನಿರೀಕ್ಷೆ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 26 ಜೂನ್ 2021, 12:36 IST
Last Updated 26 ಜೂನ್ 2021, 12:36 IST
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ    

ಶಿವಮೊಗ್ಗ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ರಾಜ್ಯಕ್ಕೆ ಎರಡು ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಸುರೇಶ್ ಅಂಗಡಿ ನಿಧನದಿಂದ ಒಂದು ಸ್ಥಾನ ತೆರವಾಗಿದೆ. ಅದರ ಜತೆಗೆ ರಾಜ್ಯಕ್ಕೆ ಮತ್ತೊಂದು ಸ್ಥಾನ ನೀಡುವಂತೆ ಮನವಿ ಮಾಡುತ್ತೇವೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ದೊರಕುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಸಚಿವ ಸಿ.ಪಿ.ಯೋಗೀಶ್ವರ್ ದೆಹಲಿ ಭೇಟಿ ವಿಚಾರದಲ್ಲಿ ಯಾವುದೇ ವಿಶೇಷ ಇಲ್ಲ. ರಾಜ್ಯದ ಸಚಿವರು ದೆಹಲಿಗೆ ಹೋಗಬಾರದು ಎಂದು ಸಂವಿಧಾನದಲ್ಲಿ ಏನಾದರೂ ಬರೆದಿದ್ದಾರೆಯೇ? ಬಿಜೆಪಿ ನಾಯಕರು ದೆಹಲಿಗೆ ಹೋದರೆ ಏಕೆ ಪ್ರಶ್ನೆ ಮಾಡ್ತೀರಾ ಎಂದು ಮರು ಪ್ರಶ್ನಿಸಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ನಿವೃತ್ತಿ ನಿವೃತ್ತಿ ಪಡೆಯುವುದಿಲ್ಲ ಎಂದು ಹೇಳಿರುವುದು ಸಂತಸದ ವಿಷಯ. ಒಂದು ವೇಳೆ ನಿವೃತ್ತರಾದರೂ ಕೊನೆಯವರೆಗೂ ಬಿಜೆಪಿಯಲ್ಲೇ ಇರುವುದಾಗಿ ಕೇಳಿದ್ದಾರಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.