ಶಿವಮೊಗ್ಗ: ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಎಚ್.ಡಿ. ಕುಮಾರಸ್ವಾಮಿ ಯಾರು? ಒಂದು ರೂಪಾಯಿಯನ್ನೂ ಕೊಡದೇ ಪುಗಸಟ್ಟೆ ಲೆಕ್ಕ ಕೇಳುವ ಅಧಿಕಾರ ಕುಮಾರಸ್ವಾಮಿಗೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಮಂದಿರ ನಿರ್ಮಾಣಕ್ಕೆ ಹಣ ಕೊಟ್ಟಿದ್ದರೆ ಕುಮಾರಸ್ವಾಮಿ ಅವರು ಲೆಕ್ಕ ಕೇಳಲಿ. ಅವರು ಒಂದು ಪೈಸೆಯನ್ನೂ ಕೊಟ್ಟಿಲ್ಲ’ ಎಂದು ತಿರುಗೇಟು ನೀಡಿದರು.
ಬಿಜೆಪಿ ಎಂದರೆ ಗೆಲುವಿನ ಪಕ್ಷ:ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಗೆಲ್ಲುತ್ತಾರೋ ಇಲ್ಲವೋ ಎಂದು ಕಾದುನೋಡಬೇಕಾದ ಪರಿಸ್ಥಿತಿ ಹಿಂದೆ ಇತ್ತು. ಈಗ ಆ ಪರಿಸ್ಥಿತಿ ಇಲ್ಲ. ಬಿಜೆಪಿ ಎಂದರೆ ಗೆಲುವಿನ ಪಕ್ಷ ಎನ್ನುವಷ್ಟರ ಮಟ್ಟಿಗೆ ಬೆಳೆದಿದೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.