ADVERTISEMENT

ಶಿವಮೊಗ್ಗ: ಲಾರಿ ಹಾಯ್ದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 6:50 IST
Last Updated 6 ನವೆಂಬರ್ 2022, 6:50 IST

ಶಿವಮೊಗ್ಗ: ಭದ್ರಾವತಿ ಬಳಿ ಕಡದಕಟ್ಟೆ ಸಿದ್ದಾಪುರದ ಬೈಪಾಸ್ ರಸ್ತೆಯ ಕಾಡುಮನೆಯ ಹೋಟೆಲ್ ಬಳಿ ಶನಿವಾರ ರಸ್ತೆ ಅಪಘಾತದಲ್ಲಿ ವಿವಾಹಿತ ಮಹಿಳೆ ಸಾವನ್ನಪ್ಪಿದ್ದಾರೆ. ಬೈಕ್ ಸವಾರನ ಸ್ಥಿತಿಗಂಭೀರವಾಗಿದೆ.

ಭದ್ರಾವತಿ ನಗರದ 26 ವರ್ಷದ ಜ್ಞಾನೇಶ್ವರಿ (ಪ್ರೀತಿ) ಮೃತಪಟ್ಟವರು. ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಸಂಬಂಧ ದಾಖಲಾಗಿದ್ದ ಪತಿಯನ್ನು ನೋಡಲು ಮೈದುನನ ಜೊತೆ ಬೈಕ್‌ನಲ್ಲಿ ಹೊರಟಿದ್ದರು. ಆಗ ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಹೊಡೆದಿದೆ.

ಕೆಳಗೆ ಬಿದ್ದ ಜ್ಞಾನೇಶ್ವರಿ ಮೇಲೆ ಹಿಂಬದಿಯಲ್ಲಿ ಬರುತ್ತಿದ್ದ ಲಾರಿ ಹರಿದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಪ್ರೇಮಸಾಗರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಭದ್ರಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.