ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕು ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಡಿ ಬಳಿ ಹಳ್ಳ ದಾಟುವಾಗ ರೈತ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ.
ಅಗಸರಕೊಪ್ಪದ ಜೆರಾಲ್ಡ್ ಮಚಾದೋ ಅವರ ಪತ್ನಿ ಜಸ್ಟಿನ್ ಮಚಾದೋ (36) ಮೃತ ಮಹಿಳೆ.
ಗದ್ದೆಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ತಾಯಿ ಜತೆ ಹಳ್ಳ ದಾಟಲು ಹೋಗಿದ್ದ 10 ವರ್ಷದ ಮಗ ಜೊಯೆಲ್ ಅಪಾಯದಿಂದ ಪಾರಾಗಿದ್ದಾನೆ.
ತಾವು ಮುಳುಗುವಾಗಲು ನೀರಿಗೆ ಇಳಿಯದಂತೆ ಮಗನನ್ನು ಎಚ್ಚರಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.