ADVERTISEMENT

ಹೊಳೆಹೊನ್ನೂರು: ಡೆಂಗಿಯಿಂದಾಗಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 6:20 IST
Last Updated 5 ಅಕ್ಟೋಬರ್ 2021, 6:20 IST
ಪರಮೇಶ್
ಪರಮೇಶ್   

ಹೊಳೆಹೊನ್ನೂರು: ಭದ್ರಾವತಿ ತಾಲ್ಲೂಕಿನ ಗುಡುಮಗಟ್ಟೆಯ ಯುವಕ ಜಿ.ಜೆ. ಪರಮೇಶ್ (28) ಡೆಂಗಿಯಿಂದ ಮೃತಪಟ್ಟಿದ್ದಾರೆ.

ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಪರಮೇಶ್‌ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ.

‘ಅವರಿಗೆ ಡೆಂಗಿ ಇರುವುದು ದೃಢಪಟ್ಟಿದೆ’ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ADVERTISEMENT

ಕಾಂಗ್ರೆಸ್ ಮುಖಂಡ ಜೋತ್ರದಾರ್ ಜಯಪ್ಪ ಅವರ ಹಿರಿಯ ಪುತ್ರರಾದ ಜಿ.ಜೆ.ಪರಮೇಶ್ ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು.

ಅವರಿಗೆ ಪತ್ನಿ,ಒಂದು ವರ್ಷದ ಹೆಣ್ಣು ಮಗುವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.