ಸಾಗರ: ತಾಲ್ಲೂಕಿನ ಅದರಂತೆ ಗ್ರಾಮದ ಮಿಥುನ್(27) ಶುಕ್ರವಾರ ರಾತ್ರಿ ಬೆಂಗಳೂರಿನ ರಾಜ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಅದರಂತೆ ಗ್ರಾಮದ ಕೃಷಿಕ ಅಶೋಕ್ ಅವರ ಪುತ್ರ ಮಿಥುನ್ ಡಿಪ್ಲೊಮಾ ಎಂಜಿನಿಯರಿಂಗ್ ಪದವಿ ಪಡೆದಿದ್ದು ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.
ಮಿಥುನ್ ಅವರು ರಾಜ ಕಾಲುವೆ ಬಳಿ ತಮ್ಮ ಬೈಕ್ ನಿಲ್ಲಿಸಿದ್ದು ಬೈಕ್ ತೆಗೆಯಲು ಹೋದಾಗ ಕಾಲು ಜಾರಿ ಬೈಕ್ ಸಮೇತ ಕಾಲುವೆಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.