ADVERTISEMENT

‘ಧೂಮಪಾನ– ಕೋವಿಡ್‌ಗೆ ಆಹ್ವಾನ ನೀಡಿದಂತೆ’

ರೋಗ ನಿರೋಧಕ ಶಕ್ತಿ ಕುಂದಿಸಲಿದೆ ತಂಬಾಕು–ಬಿಎಂಪಿ ಆಯುಕ್ತ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 3:04 IST
Last Updated 1 ಡಿಸೆಂಬರ್ 2020, 3:04 IST
ಕಾರ್ಯಾಗಾರದಲ್ಲಿ ಎನ್‌.ಮಂಜುನಾಥ ಪ್ರಸಾದ್‌ ಮಾತನಾಡಿದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ಮನೋರಂಜನ್ ಹೆಗ್ಡೆ, ಧೂಮಪಾನ ಮುಕ್ತ ಬೆಂಗಳೂರು ಅಭಿಯಾನದ ನಿರ್ದೇಶಕಕಿ ಡಾ.ತ್ರಿವೇಣಿ.ಬಿ.ಎಸ್, ಕಾರ್ಯಕ್ರಮ ವ್ಯವಸ್ಥಾಪಕ ಅಚ್ಚುತ.ಎನ್.ಜಿ ಇದ್ದಾರೆ
ಕಾರ್ಯಾಗಾರದಲ್ಲಿ ಎನ್‌.ಮಂಜುನಾಥ ಪ್ರಸಾದ್‌ ಮಾತನಾಡಿದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ಮನೋರಂಜನ್ ಹೆಗ್ಡೆ, ಧೂಮಪಾನ ಮುಕ್ತ ಬೆಂಗಳೂರು ಅಭಿಯಾನದ ನಿರ್ದೇಶಕಕಿ ಡಾ.ತ್ರಿವೇಣಿ.ಬಿ.ಎಸ್, ಕಾರ್ಯಕ್ರಮ ವ್ಯವಸ್ಥಾಪಕ ಅಚ್ಚುತ.ಎನ್.ಜಿ ಇದ್ದಾರೆ   

ಬೆಂಗಳೂರು: 'ಧೂಮಪಾನದಿಂದ ಹಾಗೂ ಪರೋಕ್ಷ ಧೂಮಪಾನದಿಂದ ದೇಹದ ರೋಗನಿರೋಧಕ ಶಕ್ತಿಯು ಕುಂದುತ್ತದೆ. ಇದರಿಂದ ಕೋವಿಡ್-19 ನಂತಹ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚು’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಸಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ, ತಂಬಾಕು ಉತ್ಪನ್ನ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ 2003 ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತು ಬಿಬಿಎಂಪಿಯು ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ನಗರದಲ್ಲಿ ಸದ್ಯ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಸ್ವಲ್ಪವೇ ನಿರ್ಲಕ್ಷ್ಯ ತೋರಿದರೂ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಲಿದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.