ಪೊನ್ನಂಪೇಟೆ (ಕೊಡಗು): ಸಮೀಪದ ಕುಮಟೂರು ಗ್ರಾಮದ ಪಣಿ ಯರವರ ಅಯ್ಯಪ್ಪ ಎಂಬ ಬಾಲಕ (14), ಶನಿವಾರ ರಾತ್ರಿ ಹುಲಿ ದಾಳಿಗೆ ಬಲಿಯಾಗಿದ್ದಾನೆ.
ಗ್ರಾಮದ ಕೋಟ್ರಂಗಡ ಬಿದ್ದಪ್ಪ ಅವರ ಲೈನ್ಮನೆಯಲ್ಲಿ, ತಂದೆ ಪಣಿ ಯರವರ ಬಸವ ಅವರೊಂದಿಗೆ ವಾಸವಾಗಿದ್ದ ಅಯ್ಯಪ್ಪ, ಶ್ರೀಮಂಗಲದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ಸೌದೆ ತರಲೆಂದು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿದೆ. ಕೊಟ್ರಂಗಡ ಅಶ್ವಥ್ ಅವರ ತೋಟದಲ್ಲಿಮೃತದೇಹ ಪತ್ತೆಯಾಗಿದೆ. ಹುಲಿಯ ಕೂದಲು ಮೃತದೇಹದ ಮೇಲೆ ಬಿದ್ದಿದ್ದಾಗಿ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.