ADVERTISEMENT

ಕರಡಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 21 ಜೂನ್ 2013, 13:14 IST
Last Updated 21 ಜೂನ್ 2013, 13:14 IST

ಗುಬ್ಬಿ: ಆಹಾರಕ್ಕಾಗಿ ಅಲೆಯುತ್ತಿದ್ದ 12 ವರ್ಷದ ಹೆಣ್ಣು ಕರಡಿಯೊಂದು ದುಷ್ಕರ್ಮಿಗಳ ಗುಂಡೇಟಿನಿಂದ ತೀವ್ರ ಗಾಯಗೊಂಡ ಘಟನೆ ತಾಲ್ಲೂಕಿನ ಚೇಳೂರು ಹೋಬಳಿ ಗಂಗಯ್ಯನಪಾಳ್ಯದ ಮಠದಲ್ಲಿ ಬುಧವಾರ ರಾತ್ರಿ ನಡೆದಿದೆ.


ಗಂಗಯ್ಯನ ಪಾಳ್ಯದ ಮಠದ ರೈತರಾದ ಜಯರಂಗಮ್ಮ ಅವರ ತೋಟದಲ್ಲಿ ಸಿಕ್ಕಿದ ಕರಡಿ ರಕ್ತಸ್ರಾವವಾಗಿ ಜ್ಞಾನ ತಪ್ಪಿ ಬಿದ್ದಿತ್ತು. ಸುಮಾರು ಆರು ಗುಂಡುಗಳು ತಗುಲಿದ ಬಗ್ಗೆ ಸಾರ್ವಜನಿಕರು ತಾಲ್ಲೂಕು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ತೀವ್ರ ಗಾಯಗೊಂಡ ಕರಡಿಯನ್ನು ಗುಬ್ಬಿಗೆ ತಂದು ಪಶು ವೈದ್ಯಾಧಿಕಾರಿಗಳಿಂದ ಚಿಕಿತ್ಸೆ ನೀಡಿ, ಗುರುವಾರ ಸಂಜೆ ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಕರಡಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು ಯಾರೆಂದು ತಿಳಿದಿಲ್ಲ ಎಂದು ಅರಣ್ಯ ಇಲಾಖಾ ಅಧಿಕಾರಿ ಹರೀಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT