ಶಿರಾ: ತಾಲ್ಲೂಕಿನ ಚಿಕ್ಕ ಆಗ್ರಹಾರ ಸಮೀಪದ ಮಾರಗೊಂಡನಹಳ್ಳಿ ಗ್ರಾಮದಲ್ಲಿ ತಂತಿ ಬೇಲಿಗೆ ಸಿಲುಕಿ ಗಾಯಗೊಂಡಿದ್ದ ಕರಡಿ ಮರಿಯನ್ನು ಮಂಗಳವಾರ ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಮಾರಗೊಂಡನಹಳ್ಳಿ ಬಳಿ ಎರಡು ವರ್ಷದ ಕರಡಿ ಮರಿ ಜಮೀನಿನ ಸುತ್ತಲು ಹಾಕಿದ್ದ ತಂತಿ ಬೇಲಿಗೆ ಸಿಕ್ಕಿಹಾಕಿಕೊಂಡು ಗಾಯಗೊಂಡಿತ್ತು. ಇದನ್ನು ನೋಡಿದ ಸಾರ್ವಜನಿಕರು ಅರಣ್ಯ ಇಲಾಖೆಯವರಿಗೆ ಸುದ್ದಿ ಮುಟ್ಟಿಸಿದ್ದಾರೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಹಿಡಿದು ಅದಕ್ಕೆ ಚಿಕಿತ್ಸೆ ಕೊಡಿಸಿದ ನಂತರ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.