ADVERTISEMENT

ಗುಬ್ಬಿ ಚನ್ನಬಸವೇಶ್ವರ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2012, 8:50 IST
Last Updated 4 ಮಾರ್ಚ್ 2012, 8:50 IST

ಗುಬ್ಬಿ: ಪಟ್ಟಣದ ಗೋಸಲ ಚನ್ನಬಸವೇಶ್ವರ ಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದವು. 18ಕೋಮಿನ ಮುಖಂಡರು ರಥೋತ್ಸವ ಮುನ್ನ ಉಪ್ಪರಿಗೆಯಲ್ಲಿ ದೇವರನ್ನು ತೂಗಿ, ಪೂಜಿಸಿ ನಂತರ ವಿಧಿವಿಧಾನಗಳೊಂದಿಗೆ ರಥಕ್ಕೆ ಕೂರಿಸಿದ ನಂತರ ರಥ ಎಳೆಯಲಾಯಿತು.

ರಥ ಎಳೆಯುತ್ತಿದ್ದಂತೆ ನೆರೆದಿದ್ದ ನವ ವಧು-ವರರು, ಜನಸ್ತೋಮ ರಥದ ಕಳಸಕ್ಕೆ ಬಾಳೆಹಣ್ಣು, ದವನ ತೂರಿದರು. ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಜನ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವದ ಬಳಿಕ ನೆರೆದಿದ್ದ ಭಕ್ತರಿಗೆ ಪಾನಕ, ಫಲಾಹಾರ ವ್ಯವಸ್ಥೆಯನ್ನು ವಿವಿಧ ಕೋಮುಗಳ ಮುಖಂಡರು, ಆಟೊ ಚಾಲಕರ ಸಂಘದವರು ಸ್ವಇಚ್ಚೆಯಿಂದ ಭಕ್ತರಿಗೆ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.