ತುಮಕೂರು: ಗಲಭೆ, ಆಂತರಿಕ ಭದ್ರತೆ ವಿಷಯದಲ್ಲಿ ಗೃಹರಕ್ಷಕ ದಳ ನಿರ್ವಹಿಸುವ ನಿಸ್ವಾರ್ಥ ಸೇವೆ ಪೊಲೀಸರಿಗಿಂತ ಉತ್ತಮವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ್ಗುಪ್ತಾ ತಿಳಿಸಿದರು. ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗೃಹ ರಕ್ಷಕ ದಳದ ಕೇಂದ್ರೀಯ ವಲಯ ಮಟ್ಟದ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಗೃಹ ರಕ್ಷಕ ದಳದಲ್ಲಿ ರೈಫಲ್ ಶೂಟಿಂಗ್, ಫೈರ್ ಫೈಟಿಂಗ್ನಂತಹ ವೃತ್ತಿಪರ ಕ್ರೀಡೆಗಳ ತರಬೇತಿ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಮಾತನಾಡಿದರು. ಅಂತಿಮ ಸುತ್ತಿನ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ತಂಡವು ಬೆಂಗಳೂರು ನಗರ ತಂಡವನ್ನು ಸೋಲಿಸಿ, ಪ್ರಶಸ್ತಿಗೆ ಭಾಜನವಾಯಿತು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿಜೇತರಾದ ಏಳು ಜಿಲ್ಲೆಗಳ ಗೃಹರಕ್ಷಕ ದಳದ ಸಿಬ್ಬಂದಿಗೆ ಬಹುಮಾನ ವಿತರಿಸಲಾಯಿತು. ಕೊಂಡವಾಡಿ ಚಂದ್ರಶೇಖರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ರಮಣ್ಗುಪ್ತಾ ಅವರನ್ನು ಗೃಹರಕ್ಷಕ ದಳದ ಪರವಾಗಿ ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟ ಕೆ.ರವಿಕುಮಾರ್, ಉಪಸಮಾದೇಷ್ಟ ಪಿ.ಎ.ನಾಗರಾಜರಾವ್ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.