ADVERTISEMENT

ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 5:02 IST
Last Updated 5 ಮಾರ್ಚ್ 2018, 5:02 IST

ಪಾವಗಡ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ತುಂಬಿ ವೈಚಾರಿಕ ಪ್ರಜ್ಞೆ ಬೆಳೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ತಿಳಿಸಿದರು.

ಪಟ್ಟಣದಲ್ಲಿ ಈಚೆಗೆ ನಡೆದ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ಕಾರ್ಯಾಗಾರ, ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಿದರೆ ಆತ್ಮತೃಪ್ತಿ ದೊರೆಯುತ್ತದೆ. ಮೌಢ್ಯತೆಯನ್ನು ಹೋಗಲಾಡಿಸಿ, ವೈಚಾರಿಕ ಪ್ರಜ್ಞೆಯನ್ನು ಮಕ್ಕಳಲ್ಲಿ ಮೂಡಿಸುವತ್ತ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದರು.

ADVERTISEMENT

ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಮಾತನಾಡಿ, ಮಕ್ಕಳೊಂದಿಗೆ ಸಂತೋಷದಿಂದ ನಲಿಯುತ್ತ ಕಲಿಸಿದಾಗ ಹೊಸ ಸಂಶೋಧನೆಗಳಿಗ, ಅನ್ಷೇಷಣೆಗಳಿಗೆ ಮಕ್ಕಳು ಅಣಿಯಾಗುತ್ತಾರೆ. ಹುದ್ದೆಗಳು ಶಾಶ್ವತವಲ್ಲ ನಡವಳಿಕೆಗಳು ಮುಖ್ಯವಾಗಿರಬೇಕು ಎಂದರು.

ಆಧುನಿಕ ಶಿಕ್ಷಣದಲ್ಲಿ ತರಗತಿ ಕೊಠಡಿಯಿಂದ ಹೊರಗೆ ಬಂದು ಬೋಧಿಸುವ, ವಿದ್ಯಾರ್ಥಿಗಳಲ್ಲಿ ಕುತೂಹಲಕಾರಿ ಪ್ರವೃತ್ತಿ ಬೆಳೆಸುವ ಅನಿವಾರ್ಯತೆ ಇದೆ ಎಂದರು.

ವಿಜ್ಞಾನ ವಿಷಯ ಪರಿವೀಕ್ಷಕ ವಿ.ಮಂಜುನಾಥಸ್ವಾಮಿ, ಸಂಪನ್ಮೂಲ ವ್ಯಕ್ತಿ ಸುಬ್ಬಯ್ಯ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಕುಮಾರಸ್ವಾಮಿ, ವಿಷಯ ಪರಿವೀಕ್ಷಕ ಕೆ.ಎಚ್.ಪಾಪಯ್ಯ, ಎಸ್.ರಾಜಕುಮಾರ್, ಬಿ.ಎಂ.ಹನುಮಂತಪ್ಪ, ಎಚ್.ಚಿತ್ತಯ್ಯ, ಮುದುಕಪ್ಪ, ಬಿ.ಆರ್.ಸಿ ಪವನಕುಮಾರರೆಡ್ಡಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ವೆಂಕಟರಾಮ್, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಓ.ಧನಂಜಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.