ADVERTISEMENT

ರಸ್ತೆಗೆ ಗಿಡ ನೆಟ್ಟು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2013, 6:02 IST
Last Updated 12 ಸೆಪ್ಟೆಂಬರ್ 2013, 6:02 IST

ತೋವಿನಕೆರೆ: ರಸ್ತೆ ಗಿಡ ನೆಟ್ಟು ದುರಸ್ತಿಗೆ ಆಗ್ರಹಿಸಿದ ಘಟನೆ ಮಧುಗಿರಿ ತಾಲ್ಲೂಕು ಗೊಬಲಗುಟ್ಟೆಯಲ್ಲಿ ಬುಧವಾರ ನಡೆಯಿತು.

ತೋವಿನಕೆರೆ- ಕೈಮರ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆಯನ್ನು ಶೀಘ್ರ ಸರಿಪಡಿಸಬೇಕು. ಇಲ್ಲದ್ದಿದರೆ ರಸ್ತೆ­ಯಲ್ಲಿ ವಾಹನ ಸಂಚಾರ ನಿಲ್ಲಿಸಿ ಪ್ರತಿಭಟಿಸಲಾಗುತ್ತದೆ ಎಂದು ಸರ್ವ ಪ್ರದೇಶ ಸಮನಾಭಿವೃದ್ಧಿ ಚಿಂತನಾ ವೇದಿಕೆಯ ಅಧ್ಯಕ್ಷ ಎ.ಸಿ.ರಂಗಸ್ವಾಮಿ ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ರಸ್ತೆ ದುರಸ್ತಿ ಕಾರ್ಯ ನಡೆದಿಲ್ಲ. ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಹಲವು ಉದಾಹರಣೆಗಳಿವೆ. ಬಸ್‌ನಲ್ಲಿ ಪ್ರಯಾಣಿಸುವ ಅನೇಕರ ಬೆನ್ನು ಮೂಳೆ ಮುರಿದಿದೆ ಎಂದು ದೂರಿದರು.

ಈ ರಸ್ತೆ ದುರಸ್ತಿಯಾದರೆ, ತುಮಕೂರಿನಿಂದ ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಹಳ್ಳಿಗಳಿಗೆ ಪ್ರಯಾಣಿಸಲು ಹತ್ತಿರದ ದಾರಿಯಾಗಿರುತ್ತದೆ. ಈ ವಿಚಾರವನ್ನು ಅಧಿಕಾರಿಗಳು ಗಮನಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.