ADVERTISEMENT

ಲಕ್ಷ ಭಕ್ತರು ಬರುವ ನಿರೀಕ್ಷೆ

ಡಾ.ಶಿವಕುಮಾರ ಸ್ವಾಮೀಜಿ 111ನೇ ಜನ್ಮದಿನೋತ್ಸವ, ಗುರುವಂದನಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 5:55 IST
Last Updated 29 ಮಾರ್ಚ್ 2018, 5:55 IST
ಲಕ್ಷ ಭಕ್ತರು ಬರುವ ನಿರೀಕ್ಷೆ
ಲಕ್ಷ ಭಕ್ತರು ಬರುವ ನಿರೀಕ್ಷೆ   

ತುಮಕೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 11ನೇ ಜನ್ಮದಿನೋತ್ಸವ ಮತ್ತು ಗುರುವಂದನಾ ಮಹೋತ್ಸವಕ್ಕೆ ಮಠದ ಅಂಗಳದಲ್ಲಿ ಭರದ ಸಿದ್ಧತೆಗಳು ನಡೆದಿವೆ. ಏಪ್ರಿಲ್ 1ರಂದು ಮಠದ ಆವರಣದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಚುನಾವಣೆ ನೀತಿ ಸಂಹಿತೆ ಘೋಷಣೆ ಪ್ರಯುಕ್ತ ಈ ಬಾರಿ ರಾಜಕಾರಣಿಗಳು, ರಾಜ್ಯಪಾಲರು ಪಾಲ್ಗೊಳ್ಳುತ್ತಿಲ್ಲ. ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ, ರಾಷ್ಟ್ರಪತಿಯವರನ್ನು ಅತಿಥಿಗಳಾಗಿ ಆಹ್ವಾನಿಸುವ ಪ್ರಯತ್ನ ನಡೆದಿತ್ತು. ಆದರೆ, ಚುನಾವಣೆ ನೀತಿ ಸಂಹಿತ ಯಾವಾಗಲಾದರೂ ಘೋಷಣೆಯಾಗಿ ಬಿಡಬಹುದು ಎಂಬ ಎಚ್ಚರಿಕೆಯಿಂದ ಯಾರನ್ನೂ ಅತಿಥಿಗಳಾಗಿ ಆಹ್ವಾನಿಸಲಿಲ್ಲ ಎಂದು ಮಠದ ಮೂಲಗಳು ಹೇಳಿವೆ.

9 ಕಡೆ ಕೊಪ್ಪಲು: ಈ ಬಾರಿ 111ನೇ ಜನ್ಮದಿನೋತ್ಸವ ಆಗಿರುವುದರಿಂದ ಅಂದಾಜು 1 ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಅವರಿಗೆ ಉಪಹಾರ, ಊಟದ ವ್ಯವಸ್ಥೆ, ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಹಗಲು ಮತ್ತು ರಾತ್ರಿ ಹೊತ್ತು ಊಟ ವ್ಯವಸ್ಥೆ ನಡೆಯಲಿದೆ. ಉಪಹಾರಕ್ಕೆ ಕೇಸರಿ ಬಾತ್, ಖಾರಾ ಬಾತ್ ಮಾಡಲಾಗುವುದು. ಊಟಕ್ಕೆ ಬೂಂದಿ, ಖಾರಾ ಬೂಂದಿ, ಪಾಯಸ ಮಾಡಲಾಗುತ್ತಿದೆ ಎಂದು ಮಠದ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.