ADVERTISEMENT

ಸಭಿಕರಿಂದ ಮೌನಾಚರಣೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2013, 7:05 IST
Last Updated 16 ಡಿಸೆಂಬರ್ 2013, 7:05 IST
ಚಿಕ್ಕಬಳ್ಳಾಪುರದಲ್ಲಿ ಭಾನುವಾರ ನಡೆದ ಗುರು ಸಂಸ್ಮರಣೆ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಶಾಖಾ ಮಠದ ಶಿವಕುಮಾರನಾಥ ಸ್ವಾಮೀಜಿ ನಿಧನರಾದ ಕಾರಣ ಮೌನಚರಣೆ ನಡೆಸಲಾಯಿತು.
ಚಿಕ್ಕಬಳ್ಳಾಪುರದಲ್ಲಿ ಭಾನುವಾರ ನಡೆದ ಗುರು ಸಂಸ್ಮರಣೆ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಶಾಖಾ ಮಠದ ಶಿವಕುಮಾರನಾಥ ಸ್ವಾಮೀಜಿ ನಿಧನರಾದ ಕಾರಣ ಮೌನಚರಣೆ ನಡೆಸಲಾಯಿತು.   

ಚಿಕ್ಕಬಳ್ಳಾಪುರ: ಮುಖ್ಯ ಅತಿಥಿಗಳ ಭಾಷಣ ಮುಗಿದ ನಂತರ ನಿಗದಿಯಾಗಿದ್ದ ಗುರುವಂದನಾ ಕಾರ್ಯಕ್ರಮ ನಡೆಯಲಿಲ್ಲ. ತುಮಕೂರು ಜಿಲ್ಲೆ ಬಳಿಯ ಮಾಯಸಂದ್ರದ ಆದಿಚುಂಚನಗಿರಿ ಶಾಖಾ ಮಠದ ಶಿವಕುಮಾರನಾಥ ಸ್ವಾಮೀಜಿ ನಿಧನರಾದ ಕಾರಣ ಮೌನಾಚರಣೆ ಮಾಡುವ ಮೂಲಕ ಕಾರ್ಯಕ್ರಮ ಕೊನೆಗೊಳಿಸಲಾಯಿತು.

ಅದ್ದೂರಿಯಾಗಿ ನಡೆಸಲು ಉದ್ದೇಶಿಸಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರು, ಗುರುಗಳನ್ನು ವಿಶೇಷವಾಗಿ ಸನ್ಮಾನಿಸುವ ಅವಕಾಶ ತಪ್ಪಿದ್ದರಿಂದ ಬೇಸರಿಸಿಕೊಂಡು ಹಿಂತಿರುಗಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದವರು ಮೌನಾಚರಣೆ ನಡೆಸುವ ಮೂಲಕ ಸ್ವಾಮೀಜಿ ಆತ್ಮಕ್ಕೆ ಶಾಂತಿ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.