ADVERTISEMENT

ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 9:14 IST
Last Updated 25 ಅಕ್ಟೋಬರ್ 2017, 9:14 IST

ತುಮಕೂರು: ‘ಮಾಂಸ ತಿಂದು ದೇವಾಲಯಕ್ಕೆ ಹೋದರೆ ತಪ್ಪೇನು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಬರಲಿ’ ಎಂದು ಮಾಜಿ ಸಚಿವ, ಬಿಜೆಪಿಯ ಎಸ್‌.ಶಿವಣ್ಣ ಸವಾಲು ಹಾಕಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಟಿಪ್ಪು ಜಯಂತಿ ಆಚರಣೆ ಹೆಸರಿನಲ್ಲಿ ಹಾಗೂ ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮ ವಿಷಯ ಎತ್ತೊಕೊಂಡು ಸಮಾಜವನ್ನು ಒಡೆದಿದ್ದಾರೆ’ ಎಂದು ಆರೋಪಿಸಿದರು.

‘ಅಧಿಕಾರವಿದೆ ಎಂಬ ಅಹಂಕಾರದಿಂದ ಮೆರೆಯಬಾರದು. ಜಾತಿ ಧರ್ಮಗಳ ಮಧ್ಯೆ ದ್ವೇಷ ಬಿತ್ತುವ ಕೆಲಸ ಮಾಡಬಾರದು. ಸಮಾಜ ಒಡೆಯುವ ಹುನ್ನಾರವನ್ನು ಮುಖ್ಯಮಂತ್ರಿ ಬಿಡಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.