ADVERTISEMENT

ಮಲ್ಲಾಘಟ್ಟ ಕೆರೆ ಅಭಿವೃದ್ಧಿಗೆ ₹ 1 ಕೋಟಿ: ಶಾಸಕ ಮಸಾಲ ಜಯರಾಂ

ತುರುವೇಕೆರೆಯಲ್ಲಿ ಶಾಸಕ ಮಸಾಲ ಜಯರಾಂ ಮಾಹಿತಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 3:27 IST
Last Updated 6 ನವೆಂಬರ್ 2020, 3:27 IST
ತುರುವೇಕೆರೆ ತಾಲ್ಲೂಕಿನ ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಮಸಾಲ ಜಯರಾಂ
ತುರುವೇಕೆರೆ ತಾಲ್ಲೂಕಿನ ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಮಸಾಲ ಜಯರಾಂ   

ತುರುವೇಕೆರೆ: ತಾಲ್ಲೂಕಿನ ಮಲ್ಲಾಘಟ್ಟ ಕೆರೆ ಹಾಗೂ ಗಂಗಾಧರೇಶ್ವರ ದೇವಾಲಯವನ್ನು ಪ್ರವಾಸಿ ತಾಣವಾಗಿಸಲು ₹ 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.

ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಕೆರೆ ಮೈದುಂಬಿ ಹರಿಯುತ್ತಿದ್ದು, ಜನರನ್ನು ಆಕರ್ಷಿಸುತ್ತಿದೆ. ಅದಕ್ಕೆ ಪೂರಕ ಸೌಕರ್ಯಗಳನ್ನು ಕಲ್ಪಿಸಬೇಕಿದೆ’ ಎಂದರು.

ಕೆರೆ ಹಿಂಭಾಗದಲ್ಲಿರುವ ಗಂಗಾಧರೇಶ್ವರ ದೇವಾಲಯದ ಪಕ್ಕದಲ್ಲಿ ಹೊರಾಂಗಣ ವೇದಿಕೆ ಹಾಗೂ ಛತ್ರ ನಿರ್ಮಿಸಲಾಗುವುದು ಎಂದರು.

ADVERTISEMENT

ಆನೇಕೆರೆ ಪಂಚಾಯಿತಿ ಅಧಿಕಾರಿಗಳು, ಮಲ್ಲಾಘಟ್ಟಕೆರೆಗೆ ಬರುವ ಪ್ರವಾಸಿಗರ ವಾಹನಗಳಿಗೆ ನಿಲುಗಡೆ, ತುಂಗುದಾಣ ಸೇರದಂತೆ ಹಲವು ಸೌಕರ್ಯ ಕಲ್ಪಿಸಲಾಗುವುದು. ಅದರಿಂದ ಬರುವ ಶುಲ್ಕದಿಂದ ಕೆರೆ ನೈರ್ಮಲ್ಯ ಹಾಗೂ ನಿರ್ವಹಣೆ ಮಾಡಲಾಗುವುದು ಎಂದು ತಿಳಿಸಿದರು.

ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ರವಿ, ಆಶಾರಾಣಿ, ಮುಂಖಡರಾದ ಕೊಂಡಜ್ಜಿ ವಿಶ್ವನಾಥ್, ಬಿ.ಎಸ್.ದೇವರಾಜ್, ವಿ.ಟಿ.ವೆಂಕಟರಾಂ, ಸೋಮಣ್ಣ, ಸುರೇಶ್, ದಿನೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.