ADVERTISEMENT

10 ಸಾವಿರ ಕೊಬ್ಬರಿ ಭಸ್ಮ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 3:23 IST
Last Updated 16 ಜನವರಿ 2021, 3:23 IST
ಕೊಬ್ಬರಿ ಬೆಂಕಿಗೆ ಆಹುತಿಯಾಗಿದೆ
ಕೊಬ್ಬರಿ ಬೆಂಕಿಗೆ ಆಹುತಿಯಾಗಿದೆ   

ತುರುವೇಕೆರೆ: ತಾಲ್ಲೂಕಿನ ಹಡವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದಯ್ಯನಪಾಳ್ಯಯ ಶಿವಣ್ಣ ಅವರಿಗೆ ಸೇರಿದ 10 ಸಾವಿರ ಕೊಬ್ಬರಿಗಳು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿವೆ.

ಶಿವಣ್ಣ ಅವರು ತೋಟದಲ್ಲಿ ಶೆಡ್ ನಿರ್ಮಿಸಿ ಕೂಡಿಟ್ಟಿದ್ದರು. ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ಹತ್ತಿಕೊಂಡ ಬೆಂಕಿಗೆ ಕೊಬ್ಬರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಶುಕ್ರವಾರ ಮುಂಜಾನೆ ತೋಟಕ್ಕೆ ಭೇಟಿ ನೀಡಿದ ರೈತ ಶಿವಣ್ಣ ಕೊಬ್ಬರಿ ಸುಟ್ಟು ಕರಕಲಾಗಿರುವುದನ್ನು ಕಂಡು ಕಂಗಾಲಾಗಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತಿ ಸದಸ್ಯ ಎಚ್.ಎಂ.ಯೋಗೀಶ್ ಭೇಟಿ ನೀಡಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾ
ಗಿದ್ದು, ಸರ್ಕಾರ ಕೂಡಲೇ ರೈತನ ಕಷ್ಟಕ್ಕೆ ಧಾವಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.