ADVERTISEMENT

ತುಮಕೂರು: ವಿಷಪೂರಿತ ನೀರು ಕುಡಿದು 22 ಕುರಿಗಳು ಸಾವು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 15:27 IST
Last Updated 13 ಸೆಪ್ಟೆಂಬರ್ 2020, 15:27 IST
   

ಕೋರ(ತುಮಕೂರು): ತುಮಕೂರು ತಾಲ್ಲೂಕು ಕೋರ ಹೋಬಳಿ ವಸಂತನರಸಾಪುರ ಕೈಗಾರಿಕಾ ಪ್ರದೇಶ ಒಂದನೇ ಹಂತದಲ್ಲಿ ಭಾನುವಾರ ವಿಷಪೂರಿತ ನೀರು ಕುಡಿದು 22 ಕುರಿಗಳು ಮೃತಪಟ್ಟಿವೆ.

ತರೂರು ಹಾಗೂ ಚಿಕ್ಕದಾಸರಹಳ್ಳಿ ಗೊಲ್ಲರಹಟ್ಟಿಯ ವಲಸೆ ಕುರಿಗಾಹಿಗಳು ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತಿರುವ ರೈತರ ಜಮೀನಿನಲ್ಲಿ ಮಂದೆ ಹಾಕಿ ಕುರಿ ಮೇಯಿಸುತ್ತಿದ್ದರು. ಭಾನುವಾರ ಕೈಗಾರಿಕಾ ಪ್ರದೇಶದ ಅಕ್ಕಪಕ್ಕ ಕುರಿಗಾಹಿಗಳು ಕುರಿ ಮೇಯಿಸುತ್ತಿದ್ದರು. ಈ ವೇಳೆ ಫುಡ್ ಪಾರ್ಕ್ ಸಮೀಪದಲ್ಲಿ ರೂಪಿಂಗ್, ಕೆಮಿಕಲ್ ಹಾಗೂ ಇತರೆ ಕಾರ್ಖಾನೆಗಳಿಂದ ಬಿಡುಗಡೆಯಾದ ವಿಷಪೂರಿತ ನೀರು ಹಾಗೂ ತ್ಯಾಜ್ಯ ಸೇವಿಸಿ ಘಟನೆ ಸಂಭವಿಸಿದೆ.

ಭಾನುವಾರ 22 ಕುರಿಗಳು ಮೃತಪಟ್ಟಿದ್ದು, ಹಲವು ಕುರಿಗಳು ಅನಾರೋಗ್ಯಕ್ಕೀಡಾಗಿವೆ. ಹಾಗಾಗಿ ಮತ್ತಷ್ಟು ಕುರಿಗಳು ಸಾವನ್ನಪ್ಪುವ ಆತಂಕವನ್ನು ಕುರಿಗಾಹಿಗಳು ವ್ಯಕ್ತಪಡಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಕೋರ ಠಾಣೆ ಪೊಲೀಸರು ಹಾಗೂ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.